<p><strong>ಬೆಂಗಳೂರು:</strong> ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸೋಮವಾರ ಮತ್ತು ಮಂಗಳವಾರ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ವಿಭಾಗದ ಪೊಲೀಸರು ಆದೇಶ ಹೊರಡಿಸಿದ್ದಾರೆ. </p>.<p>ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಪೊಲೀಸರು ‘ಎಕ್ಸ್’ನಲ್ಲಿ ಮಾಹಿತಿ ನೀಡಿದ್ದಾರೆ.</p>.<p>ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪೂಜೆ ಮತ್ತು ರಥೋತ್ಸವ ಏರ್ಪಡಿಸಲಾಗಿದೆ.</p>.<p>ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸೋಮವಾರ ಬೆಳಿಗ್ಗೆ 8ರಿಂದ ಮಂಗಳವಾರ ಬೆಳಿಗ್ಗೆ 6ರವರೆಗೆ ನಿರ್ಬಂಧಿಸಲಾಗಿದೆ. ವಾಹನ ಸವಾರರಿಗೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ. </p>.<p>ಪರ್ಯಾಯ ಮಾರ್ಗ: ಕೊಡಿಗೇಹಳ್ಳಿ ಮತ್ತು ಹೂಡಿ ಮುಖ್ಯರಸ್ತೆ ಕಡೆಯಿಂದ ದೇವಸಂದ್ರ ಮತ್ತು ಕೆ.ಆರ್.ಪುರ ಮಾರುಕಟ್ಟೆ ಕಡೆಗೆ ಸಂಚರಿಸುವ ವಾಹನ ಸವಾರರು ಜೈ ಭುವನೇಶ್ವರಿ ಜಂಕ್ಷನ್ ಲುಲೂಸ್ ಬೇಕರಿ ಹತ್ತಿರ ಬಲ ತಿರುವು ಪಡೆದು ಅಯ್ಯಪ್ಪನಗರ ಮುಖ್ಯರಸ್ತೆ – ಬಸವನಪುರ ಮುಖ್ಯರಸ್ತೆ ಭಟ್ಟರಹಳ್ಳಿ ಜಂಕ್ಷನ್ ಮೂಲಕ ಕೆ.ಆರ್.ಪುರ ಮಾರುಕಟ್ಟೆ ಕಡೆಗೆ ಸಂಚರಿಸಬೇಕು.</p>.<p>ಕೆ.ಆರ್.ಪುರ ಮಾರುಕಟ್ಟೆ ಕಡೆಯಿಂದ ಕೊಡಿಗೇಹಳ್ಳಿ ಮತ್ತು ಹೂಡಿ ಮುಖ್ಯರಸ್ತೆ ಕಡೆಗೆ ಸಂಚರಿಸುವ ವಾಹನ ಸವಾರರು ಜಿ.ಆರ್.ಟಿ. ಹತ್ತಿರ ಬಲ ತಿರುವು ಪಡೆದು ಬಸವನಪುರ ಮುಖ್ಯರಸ್ತೆಯಲ್ಲಿ (ಕೃಷ್ಣ ಟಾಕೀಸ್ ರಸ್ತೆ) ಸಂಚರಿಸಿ ಭಟ್ಟರಹಳ್ಳಿ ಜಂಕ್ಷನ್ ಮೂಲಕ ಸಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸೋಮವಾರ ಮತ್ತು ಮಂಗಳವಾರ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ವಿಭಾಗದ ಪೊಲೀಸರು ಆದೇಶ ಹೊರಡಿಸಿದ್ದಾರೆ. </p>.<p>ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಪೊಲೀಸರು ‘ಎಕ್ಸ್’ನಲ್ಲಿ ಮಾಹಿತಿ ನೀಡಿದ್ದಾರೆ.</p>.<p>ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪೂಜೆ ಮತ್ತು ರಥೋತ್ಸವ ಏರ್ಪಡಿಸಲಾಗಿದೆ.</p>.<p>ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸೋಮವಾರ ಬೆಳಿಗ್ಗೆ 8ರಿಂದ ಮಂಗಳವಾರ ಬೆಳಿಗ್ಗೆ 6ರವರೆಗೆ ನಿರ್ಬಂಧಿಸಲಾಗಿದೆ. ವಾಹನ ಸವಾರರಿಗೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ. </p>.<p>ಪರ್ಯಾಯ ಮಾರ್ಗ: ಕೊಡಿಗೇಹಳ್ಳಿ ಮತ್ತು ಹೂಡಿ ಮುಖ್ಯರಸ್ತೆ ಕಡೆಯಿಂದ ದೇವಸಂದ್ರ ಮತ್ತು ಕೆ.ಆರ್.ಪುರ ಮಾರುಕಟ್ಟೆ ಕಡೆಗೆ ಸಂಚರಿಸುವ ವಾಹನ ಸವಾರರು ಜೈ ಭುವನೇಶ್ವರಿ ಜಂಕ್ಷನ್ ಲುಲೂಸ್ ಬೇಕರಿ ಹತ್ತಿರ ಬಲ ತಿರುವು ಪಡೆದು ಅಯ್ಯಪ್ಪನಗರ ಮುಖ್ಯರಸ್ತೆ – ಬಸವನಪುರ ಮುಖ್ಯರಸ್ತೆ ಭಟ್ಟರಹಳ್ಳಿ ಜಂಕ್ಷನ್ ಮೂಲಕ ಕೆ.ಆರ್.ಪುರ ಮಾರುಕಟ್ಟೆ ಕಡೆಗೆ ಸಂಚರಿಸಬೇಕು.</p>.<p>ಕೆ.ಆರ್.ಪುರ ಮಾರುಕಟ್ಟೆ ಕಡೆಯಿಂದ ಕೊಡಿಗೇಹಳ್ಳಿ ಮತ್ತು ಹೂಡಿ ಮುಖ್ಯರಸ್ತೆ ಕಡೆಗೆ ಸಂಚರಿಸುವ ವಾಹನ ಸವಾರರು ಜಿ.ಆರ್.ಟಿ. ಹತ್ತಿರ ಬಲ ತಿರುವು ಪಡೆದು ಬಸವನಪುರ ಮುಖ್ಯರಸ್ತೆಯಲ್ಲಿ (ಕೃಷ್ಣ ಟಾಕೀಸ್ ರಸ್ತೆ) ಸಂಚರಿಸಿ ಭಟ್ಟರಹಳ್ಳಿ ಜಂಕ್ಷನ್ ಮೂಲಕ ಸಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>