<p><strong>ಬೆಂಗಳೂರು</strong>: ‘ಸಭೆ–ಸಮಾರಂಭಗಳ ಮೂಲಕ ಪಕ್ಷದ ಸಂಘಟನೆ ಸಾಧ್ಯವಿಲ್ಲ. ಬೂತ್ಮಟ್ಟದಲ್ಲಿ ಕೆಲಸ ಮಾಡುತ್ತ ಜನರ ಸಮಸ್ಯೆಗೆ ಸ್ಪಂದಿಸುತ್ತಲೇ ಪಕ್ಷ ಸಂಘಟಿಸಬೇಕು’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರ್ ಗೌಡ ಕರೆ ನೀಡಿದರು.</p>.<p>ನಗರದಲ್ಲಿ ಭಾನುವಾರ ನಡೆದ ಪಕ್ಷದ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೆಆರ್ಪಿಪಿ ಸ್ಥಾಪನೆಯಾಗಿ ನಾಲ್ಕೈದು ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 15-20 ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಸವಾಲೊಡ್ಡಿದೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದರು.</p>.<p>ದಿನದ 24 ಗಂಟೆಯೂ ಕೆಲಸ ಮಾಡುತ್ತ ಪಕ್ಷದ ಅಧ್ಯಕ್ಷ ಜನಾರ್ದನ ರೆಡ್ಡಿ ಅವರ ಕನಸನ್ನು ನನಸು ಮಾಡಲು ಶ್ರಮಿಸೋಣ. ರಾಜ್ಯದಾದ್ಯಂತ ಪಕ್ಷ ಸಂಘಟನೆ ನಡೆಸೋಣ ಎಂದು ಹೇಳಿದರು.</p>.<p>ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಿ.ಸಿ. ಹೇಮಲತಾ ಮಾತನಾಡಿ, ‘ಬಸವಣ್ಣನವರ ಚಿಂತನೆಗಳು, ಅವರ ಆಶಯಗಳೇ ನಮ್ಮ ಪಕ್ಷದ ಬುನಾದಿ. ಸಮಾಜದ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ನಮ್ಮ ಪಕ್ಷಕ್ಕಿದೆ’ ಎಂದು ಹೇಳಿದರು.</p>.<p>ಪಕ್ಷದ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ಮಂಗಳಾ, ಪದ್ಮಾ ರಾಜ್ಕುಮಾರ್, ಕವಿತಾ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿದ್ಯಾ, ಮೀನಾಕ್ಷಿ ಡಿ., ಆಯೇಷಾ ಭಾನು, ಆಶಿತಾ ಮತ್ತು ಶ್ರೀದೇವಿ ಅವರು ಅಧಿಕಾರ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಭೆ–ಸಮಾರಂಭಗಳ ಮೂಲಕ ಪಕ್ಷದ ಸಂಘಟನೆ ಸಾಧ್ಯವಿಲ್ಲ. ಬೂತ್ಮಟ್ಟದಲ್ಲಿ ಕೆಲಸ ಮಾಡುತ್ತ ಜನರ ಸಮಸ್ಯೆಗೆ ಸ್ಪಂದಿಸುತ್ತಲೇ ಪಕ್ಷ ಸಂಘಟಿಸಬೇಕು’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರ್ ಗೌಡ ಕರೆ ನೀಡಿದರು.</p>.<p>ನಗರದಲ್ಲಿ ಭಾನುವಾರ ನಡೆದ ಪಕ್ಷದ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೆಆರ್ಪಿಪಿ ಸ್ಥಾಪನೆಯಾಗಿ ನಾಲ್ಕೈದು ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 15-20 ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಸವಾಲೊಡ್ಡಿದೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದರು.</p>.<p>ದಿನದ 24 ಗಂಟೆಯೂ ಕೆಲಸ ಮಾಡುತ್ತ ಪಕ್ಷದ ಅಧ್ಯಕ್ಷ ಜನಾರ್ದನ ರೆಡ್ಡಿ ಅವರ ಕನಸನ್ನು ನನಸು ಮಾಡಲು ಶ್ರಮಿಸೋಣ. ರಾಜ್ಯದಾದ್ಯಂತ ಪಕ್ಷ ಸಂಘಟನೆ ನಡೆಸೋಣ ಎಂದು ಹೇಳಿದರು.</p>.<p>ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಿ.ಸಿ. ಹೇಮಲತಾ ಮಾತನಾಡಿ, ‘ಬಸವಣ್ಣನವರ ಚಿಂತನೆಗಳು, ಅವರ ಆಶಯಗಳೇ ನಮ್ಮ ಪಕ್ಷದ ಬುನಾದಿ. ಸಮಾಜದ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ನಮ್ಮ ಪಕ್ಷಕ್ಕಿದೆ’ ಎಂದು ಹೇಳಿದರು.</p>.<p>ಪಕ್ಷದ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ಮಂಗಳಾ, ಪದ್ಮಾ ರಾಜ್ಕುಮಾರ್, ಕವಿತಾ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿದ್ಯಾ, ಮೀನಾಕ್ಷಿ ಡಿ., ಆಯೇಷಾ ಭಾನು, ಆಶಿತಾ ಮತ್ತು ಶ್ರೀದೇವಿ ಅವರು ಅಧಿಕಾರ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>