‘ಕೆಲ ದಿನಗಳ ಹಿಂದಷ್ಟೇ ಕಟ್ಟಡದ ಮಾಲೀಕರು, ಸಮೋಸ ಅಂಗಡಿಯನ್ನು ಖಾಲಿ ಮಾಡಿಸಿದ್ದರು. ಅದರಿಂದ ಸಿಟ್ಟಾದ ಮಿರ್ಜಾ, ಇದಕ್ಕೆ ಬಾಬು ಕಾರಣವೆಂದು ತಿಳಿದು ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಲು ಸಂಚು ರೂಪಿಸಿದ್ದ. ಇದೇ 22ರಂದು ರಾತ್ರಿ ಬಾಬು ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಗುಂಡಿನ ದಾಳಿ ನಡೆಸಿದ್ದರು. ಗುಂಡಿನಿಂದ ತಪ್ಪಿಸಿಕೊಂಡಿದ್ದ ಬಾಬು ಮೇಲೆ ಮಾರಕಾಸ್ತ್ರಗಳಿಂದಲೂ ಹಲ್ಲೆ ಮಾಡಿ ಪರಾರಿಯಾಗಿದ್ದರು’ ಎಂದೂ ಪೊಲೀಸರು ಮಾಹಿತಿ ನೀಡಿದರು.