‘ಅನಾರೋಗ್ಯದಿಂದ ಬಳಲುತ್ತಿದ್ದ ರಾಮಕೇಶ್ ಅವರಿಗೆ ಚಿಕಿತ್ಸೆ ಕೊಡಿಸಲೆಂದು ಕಾರ್ಖಾನೆಯ ಮೇಸ್ತ್ರಿ ಮೋಹನ್ ಅವರು ಅ. 24ರಂದು ಕೆ.ಆರ್.ಪುರಕ್ಕೆ ಕರೆದುಕೊಂಡು ಬಂದಿದ್ದರು. ಬಸ್ ಇಳಿದು ತಂಗುದಾಣಕ್ಕೆ ಹೋಗುತ್ತಿರುವಾಗಲೇ ಕುಸಿದು ಬಿದ್ದಿದ್ದ ರಾಮಕೇಶ್, ರಕ್ತದ ವಾಂತಿ ಮಾಡಿಕೊಂಡು ಪ್ರಜ್ಞೆ ಕಳೆದುಕೊಂಡಿದ್ದರು. ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.