<p><strong>ಕೆ.ಆರ್.ಪುರ:</strong> ಮಹದೇವಪುರ ಕ್ಷೇತ್ರದಲ್ಲಿ ಆಯೋಜಿಸಿದ್ದ ಗ್ರಾಮಸಭೆಗೆ ಸರಿಯಾದ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಸದಸ್ಯರು ಬೇಸರ ವ್ಯಕ್ತಪಡಿಸಿದರು. </p>.<p>ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಉದ್ಘಾಟಿಸಿ, ತೆರಳಿದರು. 16 ಸದಸ್ಯರ ಪೈಕಿ 11 ಸದಸ್ಯರು ಕಾರ್ಯಕ್ರಮಕ್ಕೆ ಗೈರು ಹಾಜರಾದರು.</p>.<p>‘ಸಭೆಗೆ ಮುಂಚಿತವಾಗಿ ಆಹ್ವಾನ ನೀಡಿಲ್ಲ, ಕಾಟಾಚಾರಕ್ಕೆ ಕರೆಯಲಾಗಿದೆ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ’ ಎಂದು ಅಧ್ಯಕ್ಷೆ ಪವಿತ್ರಾ ರವಿಕುಮಾರ್ ಮತ್ತು ಪಿಡಿಒ ಶ್ರೀಧರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಏಳು ತಿಂಗಳಿನಿಂದಲೂ ಸಭೆ ನಡೆಸಿಲ್ಲ. ಪಂಚಾಯತಿ ವ್ಯಾಪ್ತಿಗೆ ಬರುವ ಕಾಜಿಸೊಣ್ಣೆನಹಳ್ಳಿಯಲ್ಲಿ ಸಮರ್ಪಕ ಕುಡಿಯುವ ನೀರಿಲ್ಲ. ರಸ್ತೆ ಡಾಂಬರೀಕರಣವಾಗಿಲ್ಲ. ಅಧ್ಯಕ್ಷೆ ಪವಿತ್ರ ಬದಲಾವಣೆ ಮಾಡಬೇಕು’ ಎಂದು ಸದಸ್ಯರಾದ ಸೋಮಶೇಖ್, ಯಲ್ಲಪ್ಪ ಅವರು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಮಹದೇವಪುರ ಕ್ಷೇತ್ರದಲ್ಲಿ ಆಯೋಜಿಸಿದ್ದ ಗ್ರಾಮಸಭೆಗೆ ಸರಿಯಾದ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಸದಸ್ಯರು ಬೇಸರ ವ್ಯಕ್ತಪಡಿಸಿದರು. </p>.<p>ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಉದ್ಘಾಟಿಸಿ, ತೆರಳಿದರು. 16 ಸದಸ್ಯರ ಪೈಕಿ 11 ಸದಸ್ಯರು ಕಾರ್ಯಕ್ರಮಕ್ಕೆ ಗೈರು ಹಾಜರಾದರು.</p>.<p>‘ಸಭೆಗೆ ಮುಂಚಿತವಾಗಿ ಆಹ್ವಾನ ನೀಡಿಲ್ಲ, ಕಾಟಾಚಾರಕ್ಕೆ ಕರೆಯಲಾಗಿದೆ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ’ ಎಂದು ಅಧ್ಯಕ್ಷೆ ಪವಿತ್ರಾ ರವಿಕುಮಾರ್ ಮತ್ತು ಪಿಡಿಒ ಶ್ರೀಧರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಏಳು ತಿಂಗಳಿನಿಂದಲೂ ಸಭೆ ನಡೆಸಿಲ್ಲ. ಪಂಚಾಯತಿ ವ್ಯಾಪ್ತಿಗೆ ಬರುವ ಕಾಜಿಸೊಣ್ಣೆನಹಳ್ಳಿಯಲ್ಲಿ ಸಮರ್ಪಕ ಕುಡಿಯುವ ನೀರಿಲ್ಲ. ರಸ್ತೆ ಡಾಂಬರೀಕರಣವಾಗಿಲ್ಲ. ಅಧ್ಯಕ್ಷೆ ಪವಿತ್ರ ಬದಲಾವಣೆ ಮಾಡಬೇಕು’ ಎಂದು ಸದಸ್ಯರಾದ ಸೋಮಶೇಖ್, ಯಲ್ಲಪ್ಪ ಅವರು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>