<p><strong>ಕೆ.ಆರ್.ಪುರ:</strong> ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಳಿಯ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮಾತನಾಡಿ, ಶಾಸಕ ಬೈರತಿ ಬಸವರಾಜ ಅವರು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದು ಈ ಕೂಡಲೇ ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ಶಾಸಕರನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಯಬೇಕು ಎಂದು ಆಗ್ರಹಿಸಿದರು.</p>.<p>‘ಜನಸಾಮಾನ್ಯರ ಮೇಲೆ ಠಾಣೆಯಲ್ಲಿ ಎಫ್ಐಆರ್ ದಾಖಲಾದರೆ ತಕ್ಷಣವೇ ಬಂಧಿಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಶಾಸಕರ ಮೇಲೆ ಎಫ್ಐಆರ್ ದಾಖಲಾದರೂ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಅಕ್ರೋಶ ವ್ಯಕ್ತಪಡಿಸಿದರು.</p>.<p>ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ‘ಹಿಂದೆ ಆಯ್ಕೆಯಾದ ಶಾಸಕರು ಕ್ಷೇತ್ರದಲ್ಲಿ ಗೌರವ ಉಳಿಸುವಂತಹ ಕೆಲಸಗಳನ್ನು ಮಾಡಿದ್ದರು. ಬೈರತಿ ಬಸವರಾಜ ಅವರು ಶಾಸಕರಾದ ಮೇಲೆ ಕ್ಷೇತ್ರದಲ್ಲಿ ಶಾಂತಿ ಇಲ್ಲದಂತಾಗಿದೆ’ ಎಂದು ಆರೋಪಿಸಿದರು.</p>.<p>ಈ ಸಂಧರ್ಭದಲ್ಲಿ ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ನಂದಕುಮಾರ್, ಮುಖಂಡರಾದ ಎಂ.ನಾರಾಯಣಸ್ವಾಮಿ, ಡಿ.ಎ.ಗೋಪಾಲ್, ಡಿ.ಕೆ.ದೇವೇಂದ್ರ, ಕಲ್ಕೆರೆ ನಾರಾಯಣಸ್ವಾಮಿ, ಬಂಡೆ ರಾಜು, ಜಯರಾಮ್, ಮೇಡಹಳ್ಳಿ ರಾಕಿ, ಅಗರ ಪ್ರಕಾಶ್, ಗಗನ್ ಯಾದವ್, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಳಿಯ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮಾತನಾಡಿ, ಶಾಸಕ ಬೈರತಿ ಬಸವರಾಜ ಅವರು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದು ಈ ಕೂಡಲೇ ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ಶಾಸಕರನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಯಬೇಕು ಎಂದು ಆಗ್ರಹಿಸಿದರು.</p>.<p>‘ಜನಸಾಮಾನ್ಯರ ಮೇಲೆ ಠಾಣೆಯಲ್ಲಿ ಎಫ್ಐಆರ್ ದಾಖಲಾದರೆ ತಕ್ಷಣವೇ ಬಂಧಿಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಶಾಸಕರ ಮೇಲೆ ಎಫ್ಐಆರ್ ದಾಖಲಾದರೂ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಅಕ್ರೋಶ ವ್ಯಕ್ತಪಡಿಸಿದರು.</p>.<p>ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ‘ಹಿಂದೆ ಆಯ್ಕೆಯಾದ ಶಾಸಕರು ಕ್ಷೇತ್ರದಲ್ಲಿ ಗೌರವ ಉಳಿಸುವಂತಹ ಕೆಲಸಗಳನ್ನು ಮಾಡಿದ್ದರು. ಬೈರತಿ ಬಸವರಾಜ ಅವರು ಶಾಸಕರಾದ ಮೇಲೆ ಕ್ಷೇತ್ರದಲ್ಲಿ ಶಾಂತಿ ಇಲ್ಲದಂತಾಗಿದೆ’ ಎಂದು ಆರೋಪಿಸಿದರು.</p>.<p>ಈ ಸಂಧರ್ಭದಲ್ಲಿ ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ನಂದಕುಮಾರ್, ಮುಖಂಡರಾದ ಎಂ.ನಾರಾಯಣಸ್ವಾಮಿ, ಡಿ.ಎ.ಗೋಪಾಲ್, ಡಿ.ಕೆ.ದೇವೇಂದ್ರ, ಕಲ್ಕೆರೆ ನಾರಾಯಣಸ್ವಾಮಿ, ಬಂಡೆ ರಾಜು, ಜಯರಾಮ್, ಮೇಡಹಳ್ಳಿ ರಾಕಿ, ಅಗರ ಪ್ರಕಾಶ್, ಗಗನ್ ಯಾದವ್, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>