<p><strong>ಕೆ.ಆರ್.ಪುರ:</strong> ಲೂರ್ದು ಮಾತೆ ಯುವಕರ ತಂಡ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಬೃಹತ್ ಮಟ್ಟದ ಅರೋಗ್ಯ ಶಿಬಿರವನ್ನು ಶೀಗೆಹಳ್ಳಿ ಸಮೀಪದ ಲೂರ್ದುನಗರದಲ್ಲಿ ಆಯೋಜಿಸಲಾಗಿತ್ತು.</p>.<p>ಆರೋಗ್ಯ ಶಿಬಿರದಲ್ಲಿ ಈಸ್ಟ್ ಪಾಯಿಂಟ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಹೃದಯ ಸಂಬಂಧಿ ಕಾಯಿಲೆ, ಕಣ್ಣಿನ ತಪಾಸಣೆ, ಇಸಿಜಿ, ಮಧುಮೇಹ, ಮೂಳೆ ಸಂಬಂಧಿತ ಕಾಯಿಲೆಯ ತಪಾಸಣೆ ನಡೆಸಿದರು.</p>.<p>ಲೂರ್ದು ಮಾತೆ ಚರ್ಚ್ ಗುರುಗಳಾದ ಸಿ.ವರ್ಗಿಸ್ ಮಾತನಾಡಿ, ‘ಪ್ರತಿಯೊಬ್ಬ ಮನಷ್ಯನಿಗೆ ಮುಖ್ಯವಾಗಿ ಬೇಕಿರುವುದು ಆರೋಗ್ಯ. ಆರೋಗ್ಯವಂತರಾಗಿ ಇದ್ದಾಗ ಮಾತ್ರ ಜೀವನದಲ್ಲಿ ಏನು ಬೇಕಿದ್ದರೂ ಸಾಧಿಸಬಹುದು’ ಎಂದರು.</p>.<p>ಯುವಕರ ತಂಡದ ಸದಸ್ಯ ಎಡ್ವಿನ್ ಮಾತನಾಡಿ, ‘ಯುವಕರ ತಂಡದಿಂದ ಆಯೋಜಿಸಿದ್ದ ಶಿಬಿರದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ತಪಾಸಣೆ ಮಾಡಿಸಿಕೊಂಡರು. 54 ಯುನಿಟ್ ರಕ್ತ ಸಂಗ್ರಹವಾಗಿದ್ದು, ಅದನ್ನು ರಕ್ತ ಭಂಡಾರ ನಿಧಿಗೆ ನೀಡಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಲೂರ್ದು ಮಾತೆ ಯುವಕರ ತಂಡ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಬೃಹತ್ ಮಟ್ಟದ ಅರೋಗ್ಯ ಶಿಬಿರವನ್ನು ಶೀಗೆಹಳ್ಳಿ ಸಮೀಪದ ಲೂರ್ದುನಗರದಲ್ಲಿ ಆಯೋಜಿಸಲಾಗಿತ್ತು.</p>.<p>ಆರೋಗ್ಯ ಶಿಬಿರದಲ್ಲಿ ಈಸ್ಟ್ ಪಾಯಿಂಟ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಹೃದಯ ಸಂಬಂಧಿ ಕಾಯಿಲೆ, ಕಣ್ಣಿನ ತಪಾಸಣೆ, ಇಸಿಜಿ, ಮಧುಮೇಹ, ಮೂಳೆ ಸಂಬಂಧಿತ ಕಾಯಿಲೆಯ ತಪಾಸಣೆ ನಡೆಸಿದರು.</p>.<p>ಲೂರ್ದು ಮಾತೆ ಚರ್ಚ್ ಗುರುಗಳಾದ ಸಿ.ವರ್ಗಿಸ್ ಮಾತನಾಡಿ, ‘ಪ್ರತಿಯೊಬ್ಬ ಮನಷ್ಯನಿಗೆ ಮುಖ್ಯವಾಗಿ ಬೇಕಿರುವುದು ಆರೋಗ್ಯ. ಆರೋಗ್ಯವಂತರಾಗಿ ಇದ್ದಾಗ ಮಾತ್ರ ಜೀವನದಲ್ಲಿ ಏನು ಬೇಕಿದ್ದರೂ ಸಾಧಿಸಬಹುದು’ ಎಂದರು.</p>.<p>ಯುವಕರ ತಂಡದ ಸದಸ್ಯ ಎಡ್ವಿನ್ ಮಾತನಾಡಿ, ‘ಯುವಕರ ತಂಡದಿಂದ ಆಯೋಜಿಸಿದ್ದ ಶಿಬಿರದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ತಪಾಸಣೆ ಮಾಡಿಸಿಕೊಂಡರು. 54 ಯುನಿಟ್ ರಕ್ತ ಸಂಗ್ರಹವಾಗಿದ್ದು, ಅದನ್ನು ರಕ್ತ ಭಂಡಾರ ನಿಧಿಗೆ ನೀಡಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>