<p><strong>ಕೆ.ಆರ್.ಪುರ:</strong> ರಸ್ತೆ ವಿಸ್ತರಣೆಗಾಗಿ ವರ್ತೂರು ಪೊಲೀಸ್ ಠಾಣೆಯನ್ನು ಗುಂಜೂರಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ, ವರ್ತೂರು ಹಿತರಕ್ಷಣಾ ವೇದಿಕೆ ಹಾಗೂ ಜಾಗೃತ ನಾಗರಿಕರು ಮತ್ತು ಗ್ರಾಮಸ್ಥರು ಸಹಿ ಸಂಗ್ರಹ ಅಭಿಯಾನ ನಡೆಸಿದರು.</p>.<p>‘ವರ್ತೂರು ಒಂದು ಪ್ರಮುಖ ಹೋಬಳಿ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಗೆ ವ್ಯಾಪಾರ ಮತ್ತು ಸಂಪರ್ಕದ ಕೊಂಡಿಯಾಗಿದೆ. ಗುಂಜೂರಿಗಿಂತ ವರ್ತೂರಿನಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡದೆ ವರ್ತೂರಿನಲ್ಲಿ ಉಳಿಯುವಂತೆ ಮಾಡಬೇಕು’ ಎಂದು ಸ್ಥಳೀಯರು ಆಗ್ರಹಿಸಿದರು.</p>.<p>‘ವರ್ತೂರು ಗ್ರಾಮದ ಸರ್ವೆ ನಂಬರ್ 52ರಲ್ಲಿ ಸುಮಾರು 28 ಗುಂಟೆ ಜಮೀನು ಲಭ್ಯವಿದ್ದು, ಈ ಜಾಗದಲ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಿಸಬೇಕು. ಠಾಣೆ ಬೇರೆಡೆಗೆ ಸ್ಥಳಾಂತರವಾಗಬಾರದು ಎಂದು ಸಹಿ ಸಂಗ್ರಹ ಅಭಿಯಾನವನ್ನು ಕೈಗೊಂಡು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಅವರಿಗೆ ಮನವಿ ನೀಡಲಾಗುತ್ತದೆ’ ಎಂದು ಕಾಂಗ್ರೆಸ್ ಮುಖಂಡ ಕುಪ್ಪಿ ಮಂಜುನಾಥ್ ಹೇಳಿದರು.</p>.<p>ಮುಖಂಡರಾದ ಜಗದೀಶ್, ಇಕ್ಬಾಲ್ ಅಹ್ಮದ್, ಪಿ.ಕೃಷ್ಣಪ್ಲ, ಸುಬ್ಬಣ್ಣ, ಶ್ರೀಧರ್ ಟಿ., ಪೋಲಿಸ್ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ರಸ್ತೆ ವಿಸ್ತರಣೆಗಾಗಿ ವರ್ತೂರು ಪೊಲೀಸ್ ಠಾಣೆಯನ್ನು ಗುಂಜೂರಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ, ವರ್ತೂರು ಹಿತರಕ್ಷಣಾ ವೇದಿಕೆ ಹಾಗೂ ಜಾಗೃತ ನಾಗರಿಕರು ಮತ್ತು ಗ್ರಾಮಸ್ಥರು ಸಹಿ ಸಂಗ್ರಹ ಅಭಿಯಾನ ನಡೆಸಿದರು.</p>.<p>‘ವರ್ತೂರು ಒಂದು ಪ್ರಮುಖ ಹೋಬಳಿ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಗೆ ವ್ಯಾಪಾರ ಮತ್ತು ಸಂಪರ್ಕದ ಕೊಂಡಿಯಾಗಿದೆ. ಗುಂಜೂರಿಗಿಂತ ವರ್ತೂರಿನಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡದೆ ವರ್ತೂರಿನಲ್ಲಿ ಉಳಿಯುವಂತೆ ಮಾಡಬೇಕು’ ಎಂದು ಸ್ಥಳೀಯರು ಆಗ್ರಹಿಸಿದರು.</p>.<p>‘ವರ್ತೂರು ಗ್ರಾಮದ ಸರ್ವೆ ನಂಬರ್ 52ರಲ್ಲಿ ಸುಮಾರು 28 ಗುಂಟೆ ಜಮೀನು ಲಭ್ಯವಿದ್ದು, ಈ ಜಾಗದಲ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಿಸಬೇಕು. ಠಾಣೆ ಬೇರೆಡೆಗೆ ಸ್ಥಳಾಂತರವಾಗಬಾರದು ಎಂದು ಸಹಿ ಸಂಗ್ರಹ ಅಭಿಯಾನವನ್ನು ಕೈಗೊಂಡು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಅವರಿಗೆ ಮನವಿ ನೀಡಲಾಗುತ್ತದೆ’ ಎಂದು ಕಾಂಗ್ರೆಸ್ ಮುಖಂಡ ಕುಪ್ಪಿ ಮಂಜುನಾಥ್ ಹೇಳಿದರು.</p>.<p>ಮುಖಂಡರಾದ ಜಗದೀಶ್, ಇಕ್ಬಾಲ್ ಅಹ್ಮದ್, ಪಿ.ಕೃಷ್ಣಪ್ಲ, ಸುಬ್ಬಣ್ಣ, ಶ್ರೀಧರ್ ಟಿ., ಪೋಲಿಸ್ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>