ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಟ್‌ಕಾಯಿನ್‌ ಪ್ರಕರಣ: ಸ್ಪಷ್ಟ ಮಾಹಿತಿಗೆ ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹ

Last Updated 26 ನವೆಂಬರ್ 2021, 16:52 IST
ಅಕ್ಷರ ಗಾತ್ರ

ಬೆಂಗಳೂರು: ಹ್ಯಾಕರ್‌ ಶ್ರೀಕೃಷ್ಣ ಭಾಗಿಯಾಗಿರುವ ಬಿಟ್‌ಕಾಯಿನ್‌ ಹ್ಯಾಕಿಂಗ್‌ ಪ್ರಕರಣಕ್ಕೆ ಸಂಬಂಧಿಸಿದ ಸ್ಪಷ್ಟ ಮಾಹಿತಿಗಳನ್ನು ಬಹಿರಂಗಪಡಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರನ್ನು ಆಗ್ರಹಿಸಿದೆ.

ಮುಖ್ಯ ಕಾರ್ಯದರ್ಶಿಯವರಿಗೆ ಶುಕ್ರವಾರ ಪತ್ರ ಸಲ್ಲಿಸಿರುವ ಕೆಆರ್‌ಎಸ್‌ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ, ‘ಬಿಟ್‌ಕಾಯಿನ್‌ ಹ್ಯಾಕಿಂಗ್‌ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವೇ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿತ್ತು ಎಂದು ಮುಖ್ಯಮಂತ್ರಿಯವರು ಹೇಳಿಕೆ ನೀಡಿದ್ದರು. ಇಂಟರ್‌ಪೋಲ್‌ಗೂ ಮಾಹಿತಿ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ದಾಖಲೆಗಳು ಮತ್ತು ಮುಖ್ಯಮಂತ್ರಿಯವರ ಹೇಳಿಕೆ ನಡುವೆ ವ್ಯತ್ಯಾಸ ಕಂಡುಬರುತ್ತಿದೆ’ ಎಂದು ಹೇಳಿದ್ದಾರೆ.

‘ಪ್ರಭಾವಿ ವ್ಯಕ್ತಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿನ್‌ ಮಾಮನಿ ಎಂಬುವವರು ಪ್ರಧಾನಿಯವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೆಯಾಗುತ್ತಿದೆ. ಈ ಪತ್ರದ ಕುರಿತು ಮುಂದಿನ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಸಚಿನ್‌ ಮಾಮನಿ ಪತ್ರ ರಾಜ್ಯ ಸರ್ಕಾರದ ಬಳಿ ಇದೆಯೆ? ಈ ಬಗ್ಗೆ ಕ್ರಮಕ್ಕೆ ಪ್ರಧಾನಿ ಕಚೇರಿಯಿಂದ ನಿರ್ದೇಶನ ನೀಡಲಾಗಿದೆಯೆ? ಜಾರಿ ನಿರ್ದೇಶನಾಲಯಕ್ಕೆ ರಾಜ್ಯ ಸರ್ಕಾರ ಸ್ವಯಂಪ್ರೇರಿತವಾಗಿ ಪ್ರಕರಣ ವರ್ಗಾಯಿಸಿತ್ತೆ? ಎಂಬ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಸರ್ಕಾರ ಬರೆದಿರುವ ಪತ್ರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT