ಮುಖ್ಯ ಕಾರ್ಯದರ್ಶಿಯವರಿಗೆ ಶುಕ್ರವಾರ ಪತ್ರ ಸಲ್ಲಿಸಿರುವ ಕೆಆರ್ಎಸ್ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ, ‘ಬಿಟ್ಕಾಯಿನ್ ಹ್ಯಾಕಿಂಗ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವೇ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿತ್ತು ಎಂದು ಮುಖ್ಯಮಂತ್ರಿಯವರು ಹೇಳಿಕೆ ನೀಡಿದ್ದರು. ಇಂಟರ್ಪೋಲ್ಗೂ ಮಾಹಿತಿ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ದಾಖಲೆಗಳು ಮತ್ತು ಮುಖ್ಯಮಂತ್ರಿಯವರ ಹೇಳಿಕೆ ನಡುವೆ ವ್ಯತ್ಯಾಸ ಕಂಡುಬರುತ್ತಿದೆ’ ಎಂದು ಹೇಳಿದ್ದಾರೆ.