‘2023ರ ಜ.2 ರಂದು ಲೋಕಾಯುಕ್ತ ಅಧಿಕಾರಿಗಳು ಮಾಗಡಿಯ ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ಕಚೇರಿ ಮೇಲೆ ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಏಜೆಂಟ್ ಒಬ್ಬನನ್ನು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿ ಶ್ರೀನಿವಾಸ ಪ್ರಸಾದ್ ಬಂಧನವಾಗಲೇ ಇಲ್ಲ. ನಿರೀಕ್ಷಣಾ ಜಾಮೀನು ಸಿಗುವ ತನಕ ಬಂಧಿಸದೆ ಕರ್ತವ್ಯ ಲೋಪ ಎಸಗಿದರು. ಅಲ್ಲದೇ, ಆರೋಪಿಯಿಂದ ಲಂಚ ಪಡೆದಿರುವ ಸಾಧ್ಯತೆಯೂ ಇದೆ’ ಎಂದು ರವಿ ಕೃಷ್ಣಾರೆಡ್ಡಿ ದೂರಿದರು.