ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಮತ್ತು ಬೆಂಗಳೂರು ಉಸ್ತುವಾರಿ ರಘುಪತಿ ಭಟ್, ‘ಕೆಆರ್ಎಸ್ ಪಕ್ಷ ಜನರ ಸಹಭಾಗಿತ್ವದಲ್ಲಿ ಸಮೃದ್ಧ ಬೆಂಗಳೂರು ನಿರ್ಮಿಸುವ ಗುರಿ ಹೊಂದಿದೆ. ಸ್ವತಂತ್ರವಾಗಿ ಯೋಚಿಸುವ ಮಹಿಳೆಯರು ರಾಜಕಾರಣದಲ್ಲಿ ತೊಡಗಲು ಹಾಗೂ ಚುನಾವಣೆಗಳಲ್ಲಿ ಸ್ಪರ್ಧಿಸಲು ವೇದಿಕೆ ಕಲ್ಪಿಸಲಿದೆ’ ಎಂದರು.