‘ಎಸಿಬಿ ವಿರುದ್ಧವೇ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಕಿಡಿ ಕಾರಿದ್ದು, ಅವರನ್ನು ವರ್ಗಾವಣೆ ಮಾಡಿಸುವಷ್ಟು ಭ್ರಷ್ಟರು ಸಶಕ್ತರಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ನಿಷ್ಠುರವಾಗಿ ನ್ಯಾಯಾಂಗದ ಜವಾಬ್ದಾರಿ ನಿರ್ವಹಿಸುತ್ತಿದ್ದ ನ್ಯಾಯಮೂರ್ತಿಗಳನ್ನು ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಿರುವ ಉದಾಹರಣೆಗಳೂ ಇವೆ’ ಎಂದು ಕೆಆರ್ಎಸ್ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ತಿಳಿಸಿದ್ದಾರೆ.