<p><strong>ಬೆಂಗಳೂರು</strong>: ಬೆಂಗಳೂರು ನಗರ ಪೊಲೀಸರ ಸಹಕಾರದಲ್ಲಿ ಕೃಪಾನಿಧಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ನಗರದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಿದರು. </p>.<p>ನಗರದಲ್ಲಿ ನಡೆದ ಡ್ರಗ್ಸ್ ಮುಕ್ತ ಸಮಾಜ ಕಾರ್ಯಕ್ರಮದಲ್ಲಿ ಜಾಗೃತಿ ನಡಿಗೆ ನಡೆಸಿ, ಡ್ರಗ್ಸ್ನ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ರಂಗೋಲಿ, ಚಿತ್ರಕಲೆ ಸೇರಿ ವಿವಿಧ ಸ್ಪರ್ಧೆಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಮಾದಕವಸ್ತು ಸೇವನೆಯ ವ್ಯಸನದ ಅಪಾಯದ ಕುರಿತಾದ ಕಲಾಕೃತಿಗಳ ಪ್ರದರ್ಶನವೂ ನಡೆಯಿತು. </p>.<p>‘ಮಾದಕ ವಸ್ತುಗಳ ಬಳಕೆಯ ವಿರುದ್ಧದ ಹೋರಾಟದಲ್ಲಿ ಸಮುದಾಯದ ಪಾತ್ರ’ದ ಬಗ್ಗೆ ವೈಟ್ಫೀಲ್ಡ್ ಉಪ ವಿಭಾಗದ ಎಸಿಪಿಗಳಾದ ಶಿವಕುಮಾರ್ ಹಾಗೂ ಪ್ರಿಯದರ್ಶಿನಿ ಈಶ್ವರ್ ಸಾನಿಕೋಪ್ ವಿವರಿಸಿದರು. </p>.<p>ಡ್ರಗ್ಸ್ ಬಳಕೆಯ ಅಪಾಯದ ಬಗ್ಗೆ ಕೃಪಾನಿಧಿ ಕಾಲೇಜಿನ ವಿದ್ಯಾರ್ಥಿಗಳು ನೃತ್ಯ ಮತ್ತು ಕಿರುನಾಟಕಗಳ ಪ್ರದರ್ಶನ ನೀಡಿದರು. ಈ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ನಗರ ಪೊಲೀಸ್ (ಮಾರತಹಳ್ಳಿ ಉಪವಿಭಾಗ) ಮತ್ತು ಕೃಪಾನಿಧಿ ವಿದ್ಯಾ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಬಳಿಕ ಮಾರತಹಳ್ಳಿ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಮಧ್ಯೆ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು.</p>.<p>ವರ್ತೂರು ಪೊಲೀಸ್ ಠಾಣೆ ತಂಡ ಅಗ್ರಸ್ಥಾನ ಪಡೆದರೆ, ಎಚ್ಎಎಲ್ ಪೊಲೀಸ್ ಠಾಣೆ ರನ್ನರ್ ಅಪ್ ಆಗಿ ಹೊರಹೊಮ್ಮಿತು. ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಬಹುಮಾನ ವಿತರಿಸಿದರು. ಕೃಪಾನಿಧಿ ಸಮೂಹ ಸಂಸ್ಥೆಗಳ ನಿರ್ದೇಶಕ ಸ್ಯಾಮ್ ಪಾಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ನಗರ ಪೊಲೀಸರ ಸಹಕಾರದಲ್ಲಿ ಕೃಪಾನಿಧಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ನಗರದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಿದರು. </p>.<p>ನಗರದಲ್ಲಿ ನಡೆದ ಡ್ರಗ್ಸ್ ಮುಕ್ತ ಸಮಾಜ ಕಾರ್ಯಕ್ರಮದಲ್ಲಿ ಜಾಗೃತಿ ನಡಿಗೆ ನಡೆಸಿ, ಡ್ರಗ್ಸ್ನ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ರಂಗೋಲಿ, ಚಿತ್ರಕಲೆ ಸೇರಿ ವಿವಿಧ ಸ್ಪರ್ಧೆಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಮಾದಕವಸ್ತು ಸೇವನೆಯ ವ್ಯಸನದ ಅಪಾಯದ ಕುರಿತಾದ ಕಲಾಕೃತಿಗಳ ಪ್ರದರ್ಶನವೂ ನಡೆಯಿತು. </p>.<p>‘ಮಾದಕ ವಸ್ತುಗಳ ಬಳಕೆಯ ವಿರುದ್ಧದ ಹೋರಾಟದಲ್ಲಿ ಸಮುದಾಯದ ಪಾತ್ರ’ದ ಬಗ್ಗೆ ವೈಟ್ಫೀಲ್ಡ್ ಉಪ ವಿಭಾಗದ ಎಸಿಪಿಗಳಾದ ಶಿವಕುಮಾರ್ ಹಾಗೂ ಪ್ರಿಯದರ್ಶಿನಿ ಈಶ್ವರ್ ಸಾನಿಕೋಪ್ ವಿವರಿಸಿದರು. </p>.<p>ಡ್ರಗ್ಸ್ ಬಳಕೆಯ ಅಪಾಯದ ಬಗ್ಗೆ ಕೃಪಾನಿಧಿ ಕಾಲೇಜಿನ ವಿದ್ಯಾರ್ಥಿಗಳು ನೃತ್ಯ ಮತ್ತು ಕಿರುನಾಟಕಗಳ ಪ್ರದರ್ಶನ ನೀಡಿದರು. ಈ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ನಗರ ಪೊಲೀಸ್ (ಮಾರತಹಳ್ಳಿ ಉಪವಿಭಾಗ) ಮತ್ತು ಕೃಪಾನಿಧಿ ವಿದ್ಯಾ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಬಳಿಕ ಮಾರತಹಳ್ಳಿ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಮಧ್ಯೆ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು.</p>.<p>ವರ್ತೂರು ಪೊಲೀಸ್ ಠಾಣೆ ತಂಡ ಅಗ್ರಸ್ಥಾನ ಪಡೆದರೆ, ಎಚ್ಎಎಲ್ ಪೊಲೀಸ್ ಠಾಣೆ ರನ್ನರ್ ಅಪ್ ಆಗಿ ಹೊರಹೊಮ್ಮಿತು. ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಬಹುಮಾನ ವಿತರಿಸಿದರು. ಕೃಪಾನಿಧಿ ಸಮೂಹ ಸಂಸ್ಥೆಗಳ ನಿರ್ದೇಶಕ ಸ್ಯಾಮ್ ಪಾಲ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>