<p><strong>ಬೆಂಗಳೂರು</strong>: ಕರ್ನಾಟಕದ ದಿಗ್ಗಜ ಕ್ರಿಕೆಟಿಗ, ಕೋಚ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರಿಕೆಟ್ ಮೈದಾನದ ಪೆವಿಲಿಯನ್ ಬ್ಲಾಕ್ಗೆ ಇಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ತೀರ್ಮಾನಿಸಿದೆ.</p><p>ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಟ್ರೋಫಿ ಫೈನಲ್ನ ಮೊದಲ ದಿನವಾದ ಫೆ.24ರಂದು ಹುಬ್ಬಳ್ಳಿ<br>ಯಲ್ಲಿ ನಾಮಕರಣ ಸಮಾರಂಭ ನಡೆಯಲಿದೆ. ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. </p><p>ಎಡಗೈ ಸ್ಪಿನ್ನರ್ ಆಗಿದ್ದ ಜೋಶಿ ಅವರು ಕರ್ನಾಟಕದ ಪರ 160 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಭಾರತ ತಂಡಕ್ಕೆ 15 ಟೆಸ್ಟ್ ಮತ್ತು 69 ಏಕದಿನ ಪಂದ್ಯಗಳನ್ನು ಆಡಿದ್ದಾರೆ.</p><p>‘ಜೋಶಿ ಅವರು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮತ್ತು ಉತ್ತರ ಕರ್ನಾಟಕದಲ್ಲಿ ಕ್ರಿಕೆಟ್ನೊಂದಿಗಿನ ನಿರಂತರ ಒಡನಾಟಕ್ಕೆ ಗೌರವ ಮತ್ತು ಮೆಚ್ಚುಗೆಯ ಸಂಕೇತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗದಗ ಜಿಲ್ಲೆಯವರಾದ ಅವರು ಹುಬ್ಬಳ್ಳಿಯಲ್ಲಿ ತಮ್ಮ ರಚನಾತ್ಮಕ ಕ್ರಿಕೆಟ್ನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅತ್ಯಂತ ವಿಶಿಷ್ಟ ಕ್ರಿಕೆಟ್ ರಾಯಭಾರಿ<br>ಗಳಲ್ಲಿ ಒಬ್ಬರಾದ ಅವರಿಗೆ ಈ ಮೂಲಕ ಶಾಶ್ವತವಾದ ಗೌರವ ನೀಡಲಾಗುತ್ತದೆ’ ಎಂದು ಕೆಎಸ್ಸಿಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದ ದಿಗ್ಗಜ ಕ್ರಿಕೆಟಿಗ, ಕೋಚ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರಿಕೆಟ್ ಮೈದಾನದ ಪೆವಿಲಿಯನ್ ಬ್ಲಾಕ್ಗೆ ಇಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ತೀರ್ಮಾನಿಸಿದೆ.</p><p>ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಟ್ರೋಫಿ ಫೈನಲ್ನ ಮೊದಲ ದಿನವಾದ ಫೆ.24ರಂದು ಹುಬ್ಬಳ್ಳಿ<br>ಯಲ್ಲಿ ನಾಮಕರಣ ಸಮಾರಂಭ ನಡೆಯಲಿದೆ. ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. </p><p>ಎಡಗೈ ಸ್ಪಿನ್ನರ್ ಆಗಿದ್ದ ಜೋಶಿ ಅವರು ಕರ್ನಾಟಕದ ಪರ 160 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಭಾರತ ತಂಡಕ್ಕೆ 15 ಟೆಸ್ಟ್ ಮತ್ತು 69 ಏಕದಿನ ಪಂದ್ಯಗಳನ್ನು ಆಡಿದ್ದಾರೆ.</p><p>‘ಜೋಶಿ ಅವರು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮತ್ತು ಉತ್ತರ ಕರ್ನಾಟಕದಲ್ಲಿ ಕ್ರಿಕೆಟ್ನೊಂದಿಗಿನ ನಿರಂತರ ಒಡನಾಟಕ್ಕೆ ಗೌರವ ಮತ್ತು ಮೆಚ್ಚುಗೆಯ ಸಂಕೇತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗದಗ ಜಿಲ್ಲೆಯವರಾದ ಅವರು ಹುಬ್ಬಳ್ಳಿಯಲ್ಲಿ ತಮ್ಮ ರಚನಾತ್ಮಕ ಕ್ರಿಕೆಟ್ನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅತ್ಯಂತ ವಿಶಿಷ್ಟ ಕ್ರಿಕೆಟ್ ರಾಯಭಾರಿ<br>ಗಳಲ್ಲಿ ಒಬ್ಬರಾದ ಅವರಿಗೆ ಈ ಮೂಲಕ ಶಾಶ್ವತವಾದ ಗೌರವ ನೀಡಲಾಗುತ್ತದೆ’ ಎಂದು ಕೆಎಸ್ಸಿಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>