‘ಬೆಂಗಳೂರು ಮಾರುಕಟ್ಟೆ ವಿಭಾಗದ ನೌಕರರಿಗೆ ಐದು ವರ್ಷಗಳಿಂದ ಬೋನಸ್ ನೀಡಿಲ್ಲ. ಇದೇ ವಿಭಾಗದಲ್ಲಿ 25 ವರ್ಷಗಳಿಂದ ಕೆಲಸ ಮಾಡುತ್ತಿರುವ ಎಲ್ಲ ನೌಕರರನ್ನು ಕಾಯಂಗೊಳಿಸಿ, ಆರೋಗ್ಯ ವಿಮೆಯ ಸೌಲಭ್ಯ ವಿಸ್ತರಿಸಬೇಕು. ಇಲ್ಲದಿದ್ದರೆ ಜ.9ರಂದು ಕೆಎಸ್ಡಿಎಲ್ ಕಾರ್ಖಾನೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಅಸೋಸಿಯೇಷನ್ ಅಧ್ಯಕ್ಷ ಜಿ.ಆರ್. ಶಿವಶಂಕರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.