ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ (ಯುಪಿಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ರಾಜಶೇಖರ್ ನೇತೃತ್ವದ ತಂಡ ಕೆಎಸ್ಆರ್ಟಿಸಿ 4ನೇ ಘಟಕಕ್ಕೆ ಭೇಟಿ ನೀಡಿತ್ತು. ಈ ವೇಳೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರಿಂದ ತಂತ್ರಜ್ಞಾನ, ಬಸ್ ನಿರ್ಮಾಣ ಮತ್ತು ನಿರ್ವಹಣೆ, ಪಾರ್ಸೆಲ್ ಕೊರಿಯರ್ ವ್ಯವಸ್ಥೆ, ಆನ್ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ, ಬಸ್ ನಿಲ್ದಾಣಗಳಲ್ಲಿನ ಸೌಲಭ್ಯಗಳು, ಪರಿಸರ ಸ್ನೇಹಿ ಉಪಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.