‘ಸಿಬ್ಬಂದಿಗೆ ಪ್ರಶಸ್ತಿ: ನಿಗಮದ ನಿಲ್ದಾಣ, ಡಿಪೊ ಮತ್ತು ಬಸ್ಗಳಲ್ಲಿ ಸ್ವಚ್ಛತೆ ಕಾಪಾಡುವ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ‘ಸಾರಿಗೆ ಸ್ವಚ್ಛತಾ ಪ್ರಶಸ್ತಿ’ ಮತ್ತು ‘ಸಾರಿಗೆ ಪರಿಸರ ಪ್ರಶಸ್ತಿ’ ನೀಡುವ ಕಾರ್ಯಕ್ರಮವನ್ನು ಈ ವರ್ಷದಿಂದ ಜಾರಿಗೊಳಿಸಲಾಗಿದೆ. ಪ್ರತೀ ವರ್ಷ ಗಾಂಧಿ ಜಯಂತಿ ದಿನ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಸಂಸ್ಥೆ ತಿಳಿಸಿದೆ.