‘ರಾಜ್ಯ ಬಜೆಟ್ನಲ್ಲಿ ನೌಕರರ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು. ಬಸ್ಗಳ ಸಂಚಾರ ನಿಲ್ಲಿಸಿಯೇ ಸರ್ಕಾರದ ಕಣ್ಣು ತೆರೆಸಬೇಕಿಲ್ಲ. ಪ್ರಯಾಣಿಕರಿಗೆ ತೊಂದರೆ ಕೊಡದೆ, ಅವರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲೇ ಹೋರಾಟ ಇರಲಿದೆ’ ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.