<p><strong>ಬೆಂಗಳೂರು:</strong> ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು 'ಅಪಘಾತ ತುರ್ತು ಸ್ಪಂದನ ವಾಹನ'ಗಳನ್ನು ಕೆಎಸ್ಆರ್ಟಿಸಿ ಪರಿಚಯಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.</p>.<p>ನಿಗಮದ ಬಸ್ಗಳು ಮಾರ್ಗ ಮಧ್ಯೆ ಅಪಘಾತಕ್ಕೀಡಾದರೆ, ಬ್ರೇಕ್ ಡೌನ್ ಇನ್ನಿತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡರೆ ತುರ್ತು ವಾಹನಗಳು ತಕ್ಷಣ ಸ್ಥಳಕ್ಕೆ ತೆರಳಿ ದುರಸ್ತಿ ಮಾಡಲಿವೆ. ಸಂಚಾರಿ ಕಾರ್ಯಾಗಾರ ಮಾದರಿಯಲ್ಲಿ ಇದನ್ನು ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದರು.</p>.<p>ಸದ್ಯ ಬೆಂಗಳೂರು ಮತ್ತು ಮೈಸೂರಿನಲ್ಲಿ ತಲಾ ಒಂದು ವಾಹನಗಳನ್ನು ನಿಯೋಜಿಸಲಾಗುವುದು. ಬೆಂಗಳೂರು ಸುತ್ತಮುತ್ತ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಪ್ರದೇಶಗಳಲ್ಲಿ ಈ ವಾಹನದ ಸೌಲಭ್ಯ ಇರಲಿದೆ ಎಂದು ಹೇಳಿದರು.</p>.<p>ವಿವಿಧ ನಿಗಮಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು 'ಅಪಘಾತ ತುರ್ತು ಸ್ಪಂದನ ವಾಹನ'ಗಳನ್ನು ಕೆಎಸ್ಆರ್ಟಿಸಿ ಪರಿಚಯಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.</p>.<p>ನಿಗಮದ ಬಸ್ಗಳು ಮಾರ್ಗ ಮಧ್ಯೆ ಅಪಘಾತಕ್ಕೀಡಾದರೆ, ಬ್ರೇಕ್ ಡೌನ್ ಇನ್ನಿತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡರೆ ತುರ್ತು ವಾಹನಗಳು ತಕ್ಷಣ ಸ್ಥಳಕ್ಕೆ ತೆರಳಿ ದುರಸ್ತಿ ಮಾಡಲಿವೆ. ಸಂಚಾರಿ ಕಾರ್ಯಾಗಾರ ಮಾದರಿಯಲ್ಲಿ ಇದನ್ನು ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದರು.</p>.<p>ಸದ್ಯ ಬೆಂಗಳೂರು ಮತ್ತು ಮೈಸೂರಿನಲ್ಲಿ ತಲಾ ಒಂದು ವಾಹನಗಳನ್ನು ನಿಯೋಜಿಸಲಾಗುವುದು. ಬೆಂಗಳೂರು ಸುತ್ತಮುತ್ತ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಪ್ರದೇಶಗಳಲ್ಲಿ ಈ ವಾಹನದ ಸೌಲಭ್ಯ ಇರಲಿದೆ ಎಂದು ಹೇಳಿದರು.</p>.<p>ವಿವಿಧ ನಿಗಮಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>