ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ ಚಕ್ರ ಹರಿದು ಸವಾರ ಸಾವು

Last Updated 24 ನವೆಂಬರ್ 2022, 19:42 IST
ಅಕ್ಷರ ಗಾತ್ರ

ಬೆಂಗಳೂರು: ಜೀವನ್‌ಬಿಮಾನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಬುಧವಾರ ಅಪಘಾತ ಸಂಭವಿಸಿದ್ದು, ಸವಾರ ಆರೀಸ್ (26) ಮೃತಪಟ್ಟಿದ್ದಾರೆ.

‘ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮೂಡುಗೊಪ್ಪದ ಆರೀಸ್, ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ವೈಟ್‌ಫೀಲ್ಡ್‌ನಲ್ಲಿ ಪಾದರಕ್ಷೆ ಮಾರಾಟ ಮಳಿಗೆ ಇಟ್ಟುಕೊಂಡಿದ್ದರು. ಅವರು ಬುಧವಾರ ಸಂಜೆ 6.50ರ ಸುಮಾರಿಗೆ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

‘ಎಚ್‌ಎಎಲ್ ಕಡೆಯಿಂದ ಐಎಸ್‌ಆರ್‌ಒ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ (ಕೆಎ 07 ಎಫ್‌ 1590) ಹೊರಟಿತ್ತು. ಚಾಲಕ, ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಇದೇ ರಸ್ತೆಯಲ್ಲಿ ಹೊರಟಿದ್ದ ಆರೀಸ್‌ ಅವರ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿತ್ತು.’

‘ಬೈಕ್ ಸಮೇತ ರಸ್ತೆಯಲ್ಲಿ ಬಿದ್ದಿದ್ದ ಆರೀಸ್ ತಲೆ ಮೇಲೆ ಬಸ್ಸಿನ ಮುಂಭಾಗದ ಬಲ ಚಕ್ರ ಹರಿದಿತ್ತು. ತೀವ್ರ ಗಾಯಗೊಂಡ ಆರೀಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಬಸ್ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಆತನ ವಿರುದ್ಧವೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಸ್ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT