ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಗೇರಿ ಬಳಿ ಮೆಟ್ರೊ ಕಂಬಕ್ಕೆ KSRTC ಬಸ್ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Last Updated 9 ಮೇ 2022, 3:12 IST
ಅಕ್ಷರ ಗಾತ್ರ

ಬೆಂಗಳೂರು: ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಂಗೇರಿ ಬಳಿಯ ಮೆಟ್ರೊ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

'ಕೆ.ಆರ್‌.ನಗರ ಡಿಪೊಗೆ ಸೇರಿದ ಬಸ್‌, ಮಡಿಕೇರಿಯಿಂದ ನಗರಕ್ಕೆ ಬರುತ್ತಿದ್ದಾಗ ಕೆಂಗೇರಿಯ ಪೂರ್ಣಿಮಾ ಪ್ಯಾಲೇಸ್ ಬಳಿಯ ಮೆಟ್ರೊ ಪಿಲ್ಲರ್ 545ಕ್ಕೆ ಡಿಕ್ಕಿಯಾಗಿದೆ. ರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.
ಬಸ್‌ನಲ್ಲಿ ಸುಮಾರು 45 ಪ್ರಯಾಣಿಕರಿದ್ದರು. ಗಾಯಗೊಂಡವರನ್ನೆಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT