‘ಆರೋಪಿಗಳ ಮಾತು ನಂಬಿದ್ದ ಬೆಳಗಾವಿ, ವಿಜಯಪುರ, ಬಳ್ಳಾರಿ, ಗದಗ, ಚಿತ್ರದುರ್ಗ, ದಾವಣಗೆರೆ, ರಾಯಚೂರು ಹಾಗೂ ಹಲವು ನಗರಗಳ ಅಭ್ಯರ್ಥಿಗಳು ಹಣ ನೀಡಿದ್ದರು. ಆದರೆ, ಅವರಿಗೆ ಆರೋಪಿ ಯಾವುದೇ ಕೆಲಸ ಕೊಡಿಸಿರಲಿಲ್ಲ. ಹಣವನ್ನೂ ವಾಪಸು ಕೊಟ್ಟಿರಲಿಲ್ಲ. ಬೇಸತ್ತ ಅಭ್ಯರ್ಥಿಗಳು ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಅಧಿಕಾರಿ ತಿಳಿಸಿದರು.