<p><strong>ಬೆಂಗಳೂರು</strong>: ಪರಿಹಾರ ರೂಪದಲ್ಲಿ ಸಿಕ್ಕಿರುವ ಹಣವನ್ನು ಯಾವುದೇ ಆಮಿಷಗಳಿಗೆ ಬಲಿಯಾಗಿ ಕಳೆದುಕೊಳ್ಳಬೇಡಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಕೆಎಸ್ಆರ್ಟಿಸಿಯ 35 ಮೃತ ಸಿಬ್ಬಂದಿಯ ಅವಲಂಬಿತರಿಗೆ ₹8.22 ಕೋಟಿ ವಿಮಾ ಪರಿಹಾರವನ್ನು ಶುಕ್ರವಾರ ವಿತರಣೆ ಮಾಡಿ ಅವರು ಮಾತನಾಡಿದರು.</p>.<p>‘ನಿಮ್ಮಲ್ಲಿ ಹಣವಿದೆ ಎಂದು ಗೊತ್ತಾದರೆ ಬಡ್ಡಿಗೆ ದುಡ್ಡು ಕೇಳುವವರು, ಬಾಹ್ಯ ಒತ್ತಡ, ಆಮಿಷಗಳನ್ನು ಒಡ್ಡುವವರು ಹೆಚ್ಚಾಗುತ್ತಾರೆ. ಅವುಗಳಿಗೆ ಮರುಳಾಗದೇ ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ, ಇತರೆ ಒಳ್ಳೆಯ ಕಾರ್ಯಗಳಿಗೆ ಬಳಸಿಕೊಳ್ಳಿ. ಬ್ಯಾಂಕ್ಗಳಲ್ಲಿ ಮಾತ್ರ ಎಫ್ಡಿ ಇಡಿ, ಅತಿಯಾಸೆಗೆ ಬೇರೆಲ್ಲೋ ಹೂಡಿಕೆ ಮಾಡಲು ಹೋಗಿ ಹಣ ಕಳೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.</p>.<p>ಮೃತ ಅವಲಂಬಿತರಿಗೆ ಅನುಕಂಪದ ಹುದ್ದೆಯನ್ನು ಅತ್ಯಂತ ಪಾರದರ್ಶಕವಾಗಿ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಅಪಘಾತದಿಂದ ಮೃತಪಟ್ಟ 4 ಸಿಬ್ಬಂದಿಯ ಅವಲಂಬಿತರಿಗೆ ತಲಾ ₹1 ಕೋಟಿಯಂತೆ ₹ 4 ಕೋಟಿ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 28 ಸಿಬ್ಬಂದಿಯ ಅವಲಂಬಿತರಿಗೆ ತಲಾ ₹14 ಲಕ್ಷದಂತೆ ₹3.92 ಕೋಟಿ ಹಾಗೂ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತರಿಗೆ ₹10 ಲಕ್ಷದಂತೆ ₹30 ಲಕ್ಷ ಪರಿಹಾರ ವಿತರಿಸಲಾಯಿತು.</p>.<p>ಕೆಎಸ್ಆರ್ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಗಾಯಿತ್ರಿ ಕೆ.ಎಂ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಹಾರ ರೂಪದಲ್ಲಿ ಸಿಕ್ಕಿರುವ ಹಣವನ್ನು ಯಾವುದೇ ಆಮಿಷಗಳಿಗೆ ಬಲಿಯಾಗಿ ಕಳೆದುಕೊಳ್ಳಬೇಡಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಕೆಎಸ್ಆರ್ಟಿಸಿಯ 35 ಮೃತ ಸಿಬ್ಬಂದಿಯ ಅವಲಂಬಿತರಿಗೆ ₹8.22 ಕೋಟಿ ವಿಮಾ ಪರಿಹಾರವನ್ನು ಶುಕ್ರವಾರ ವಿತರಣೆ ಮಾಡಿ ಅವರು ಮಾತನಾಡಿದರು.</p>.<p>‘ನಿಮ್ಮಲ್ಲಿ ಹಣವಿದೆ ಎಂದು ಗೊತ್ತಾದರೆ ಬಡ್ಡಿಗೆ ದುಡ್ಡು ಕೇಳುವವರು, ಬಾಹ್ಯ ಒತ್ತಡ, ಆಮಿಷಗಳನ್ನು ಒಡ್ಡುವವರು ಹೆಚ್ಚಾಗುತ್ತಾರೆ. ಅವುಗಳಿಗೆ ಮರುಳಾಗದೇ ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ, ಇತರೆ ಒಳ್ಳೆಯ ಕಾರ್ಯಗಳಿಗೆ ಬಳಸಿಕೊಳ್ಳಿ. ಬ್ಯಾಂಕ್ಗಳಲ್ಲಿ ಮಾತ್ರ ಎಫ್ಡಿ ಇಡಿ, ಅತಿಯಾಸೆಗೆ ಬೇರೆಲ್ಲೋ ಹೂಡಿಕೆ ಮಾಡಲು ಹೋಗಿ ಹಣ ಕಳೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.</p>.<p>ಮೃತ ಅವಲಂಬಿತರಿಗೆ ಅನುಕಂಪದ ಹುದ್ದೆಯನ್ನು ಅತ್ಯಂತ ಪಾರದರ್ಶಕವಾಗಿ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಅಪಘಾತದಿಂದ ಮೃತಪಟ್ಟ 4 ಸಿಬ್ಬಂದಿಯ ಅವಲಂಬಿತರಿಗೆ ತಲಾ ₹1 ಕೋಟಿಯಂತೆ ₹ 4 ಕೋಟಿ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 28 ಸಿಬ್ಬಂದಿಯ ಅವಲಂಬಿತರಿಗೆ ತಲಾ ₹14 ಲಕ್ಷದಂತೆ ₹3.92 ಕೋಟಿ ಹಾಗೂ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತರಿಗೆ ₹10 ಲಕ್ಷದಂತೆ ₹30 ಲಕ್ಷ ಪರಿಹಾರ ವಿತರಿಸಲಾಯಿತು.</p>.<p>ಕೆಎಸ್ಆರ್ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಗಾಯಿತ್ರಿ ಕೆ.ಎಂ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>