ಬೆಂಗಳೂರು: ನಗರದಿಂದ ಹೊರ ಜಿಲ್ಲೆಗಳಿಗೆ ಮಂಗಳವಾರ ಹೆಚ್ಚುವರಿಯಾಗಿ 1,100 ಬಸ್ಗಳ ಕಾರ್ಯಾಚರಣೆಗೆ ಕೆಎಸ್ಆರ್ಟಿಸಿ ನಿರ್ಧರಿಸಿದೆ.
ಸೋಮವಾರ ರಾತ್ರಿ 8 ಗಂಟೆ ತನಕ 1,100 ಬಸ್ಗಳಲ್ಲಿ32 ಸಾವಿರ ಜನ ಬೆಂಗಳೂರಿನಿಂದ ಹೊರ ಊರುಗಳಿಗೆ ಪ್ರಯಾಣಿಸಿದ್ದಾರೆ.ಬಳ್ಳಾರಿ, ದಾವಣಗೆರೆ, ಹೊಸದುರ್ಗ, ಯಾದಗಿರಿ, ಹಾಸನ, ಕಲಬುರ್ಗಿ, ಶಿವಮೊಗ್ಗ, ತಿರುಪತಿ, ಅನಂತಪುರ, ಪಾವಗಡಕ್ಕೆ ಹೆಚ್ಚಿನ ಬಸ್ಗಳು ತೆರಳಿದವು.
‘ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳನ್ನು ಅಲ್ಲಿಗೆ ನಿಯೋಜನೆ ಮಾಡಲಾಗಿದೆ.ಮಂಗಳವಾರ ಬೆಳಿಗ್ಗೆ 6ರಿಂದ ರಾತ್ರಿ 8ರ ತನಕಬಸ್ಗಳ ಕಾರ್ಯಚರಣೆ ಇರಲಿದೆ’ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.