ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಮುಖಂಡ ಎಚ್.ವಿ. ಅನಂತಸುಬ್ಬರಾವ್, ‘ಸಾರಿಗೆ ನಿಗಮಗಳು ಬೃಹತ್ ಆಗಿ ಬೆಳೆಯಲು ಸರ್ಕಾರ ಎಷ್ಟು ಕೊಡುಗೆ ನೀಡಿದೆಯೂ ಅಷ್ಷೇ ಕೊಡುಗೆಯನ್ನು ಇಲ್ಲಿನ ಕಾರ್ಮಿಕರು ಮತ್ತು ಅಧಿಕಾರಿಗಳು ನೀಡಿದ್ದಾರೆ. ಈಗಾಗಲೇ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತಿತರ ಬೇಡಿಕೆಗಳನ್ನು ಇತ್ಯರ್ಥಗೊಳಿಸಬೇಕು’ ಎಂದು ತಿಳಿಸಿದ್ದಾರೆ.