ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವ ಉಳಿಸಿದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಪುರಸ್ಕಾರ

Last Updated 1 ಫೆಬ್ರುವರಿ 2023, 16:34 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ಜಿಲ್ಲೆಯ ಅಗ್ರಹಾರ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣುಮಕ್ಕಳನ್ನು ರಕ್ಷಣೆ ಮಾಡಿದ ಕೆಎಸ್‌ಆರ್‌ಟಿಸಿ ಚಾಲಕ ಮಂಜುನಾಥ್ ಅವರಿಗೆ ನಿಗಮ ₹10 ಸಾವಿರ ನಗದು ಪುರಸ್ಕಾರ ನೀಡಿದೆ.

ನಗದು ಮತ್ತು ಅಭಿನಂದನಾ ಪತ್ರವನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ನೀಡಿ ಗೌರವಿಸಿದರು. ‘ಮಾನವೀಯ ಮೌಲ್ಯಗಳು ಉಳಿದಿವೆ ಎಂಬುದಕ್ಕೆ ಚಾಲಕ ಮಂಜುನಾಥ್ ಅವರೇ ಜೀವಂತ ಉದಾಹರಣೆ. ಈಜು ಬರುವವರೇ ನೀರಿಗೆ ಇಳಿಯಲು ಹಲವು ಬಾರಿ ಯೋಚಿಸುತ್ತಾರೆ. ಮಂಜುನಾಥ್ ಅವರು ಬಸ್‌ನಲ್ಲಿ 40 ಜನ ಇದ್ದರೂ ಬೇರೆಯವರಿಗೆ ಕಾಯದೆ ತಾವೇ ನೀರಿನಲ್ಲಿ ಜಿಗಿದು ಮಕ್ಕಳ ಪ್ರಾಣ ರಕ್ಷಿಸಿದ್ದಾರೆ. ಅವರಿಗೆ ನೀಡಿರುವ ನಗದು ಪುರಸ್ಕಾರ ಅವರ ಕಾರ್ಯಕ್ಕೆ ಸಮವಲ್ಲ. ಆದರೂ ಅವರನ್ನು ಗೌರವಿಸುವ ಕೆಲಸ ಮಾಡಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT