ತುಮಕೂರಿನಿಂದ ಬಸ್ ನಗರಕ್ಕೆ ಬರುತ್ತಿತ್ತು. ಇದೇ ಮಾರ್ಗದಲ್ಲಿ ಆರೋಪಿ ಅರುಣ್ ಕುಮಾರ್ ಕೂಡ ಬೈಕ್ನಲ್ಲಿ ಬರುತ್ತಿದ್ದ. ಆಗ ರಸ್ತೆಯಲ್ಲಿ ಜಾಗ ಬಿಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಚಾಲಕನ ಮೇಲೆ ಅರುಣ್ ಕುಮಾರ್ ಹಲ್ಲೆ ನಡೆಸಿದ್ದಾನೆ. ಬಳಿಕ, ವೆಂಕಟರೆಡ್ಡಿ ಸ್ಥಳೀಯರ ನೆರವಿನಿಂದ ಆರೋಪಿಯನ್ನು ಹಿಡಿದು ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.