ಆರು ದಿನಗಳ ಕಾಲ ವಿಭಿನ್ನ ಚಳವಳಿ ನಡೆಸಲು ನಿರ್ಧರಿಸಿರುವ ನೌಕರರು, ಗುರುವಾರ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ್ದರು. ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರ, ಮೈಸೂರು ರಸ್ತೆಯ ಸ್ಯಾಟಿಲೈಟ್ ಬಸ್ ನಿಲ್ದಾಣ, ಕೆಂಗೇರಿ ಬಸ್ ನಿಲ್ದಾಣ, ಡಿಪೋಗಳು, ಪ್ರಾದೇಶಿಕ ಕಾರ್ಯಾಗಾರಗಳು, ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಸಣ್ಣ ಸಣ್ಣ ಕ್ಯಾಂಟೀನ್ಗಳನ್ನು ತೆರೆದು ಗಮನ ಸೆಳೆದರು.