<p><strong>ಬೆಂಗಳೂರು:</strong> ಕೆಎಸ್ಆರ್ಟಿಸಿ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಟಿ.ಎಸ್. ಅವರಿಗೆ ಜಾಗತಿಕ ಉತ್ಪಾದನಾ ಕಾಂಗ್ರೆಸ್ ಮತ್ತು ಜಾಗತಿಕ ಮಾರುಕಟ್ಟೆ ಕಾಂಗ್ರೆಸ್ ಸಂಸ್ಥೆಯು ‘ಜಾಗತಿಕ ಮಹಿಳಾ ನಾಯಕಿ’ ಪ್ರಶಸ್ತಿ ನೀಡಿ ಗೌರವಿಸಿದೆ.</p>.<p>ಮುಂಬೈನ ತಾಜ್ ಲ್ಯಾಂಡ್ಸ್ ಆ್ಯಂಡ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯುನೈಟೆಡ್ ಸ್ಟೇಟ್ಸ್ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷೆ ನಿನಾ, ದುಬೈ ಓಝೋನ್ ಗ್ರೂಪ್ ಸಂಸ್ಥಾಪಕರಾದ ಓವಿಲಿಯಾ ಫೆರ್ನಾಂಡಿಸ್ ಪ್ರಶಸ್ತಿ ಪ್ರದಾನ ಮಾಡಿದರು.</p>.<p><strong>ಕೆಎಸ್ಆರ್ಟಿಸಿಗೆ ಐದು ಪ್ರಶಸ್ತಿ:</strong> ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಜಾಗತಿಕ ಬ್ರ್ಯಾಂಡ್ ಉತ್ಕೃಷ್ಟತೆ ಪ್ರಶಸ್ತಿ, ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ, ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ, ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗಳನ್ನು ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿಗೆ ಪ್ರದಾನ ಮಾಡಲಾಯಿತು.</p>.<p>ಕೆಎಸ್ಆರ್ಟಿಸಿ ಪರವಾಗಿ ವಿಭಾಗೀಯ ತಾಂತ್ರಿಕ ಎಂಜಿನಿಯರ್ ಎಚ್.ಎಸ್. ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯಾ ಸಿ., ಸಹಾಯಕ ಆಡಳಿತಾಧಿಕಾರಿ ಶಿಬಾ ಎಸ್. ಪ್ರಶಸ್ತಿಯನ್ನು ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಎಸ್ಆರ್ಟಿಸಿ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಟಿ.ಎಸ್. ಅವರಿಗೆ ಜಾಗತಿಕ ಉತ್ಪಾದನಾ ಕಾಂಗ್ರೆಸ್ ಮತ್ತು ಜಾಗತಿಕ ಮಾರುಕಟ್ಟೆ ಕಾಂಗ್ರೆಸ್ ಸಂಸ್ಥೆಯು ‘ಜಾಗತಿಕ ಮಹಿಳಾ ನಾಯಕಿ’ ಪ್ರಶಸ್ತಿ ನೀಡಿ ಗೌರವಿಸಿದೆ.</p>.<p>ಮುಂಬೈನ ತಾಜ್ ಲ್ಯಾಂಡ್ಸ್ ಆ್ಯಂಡ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯುನೈಟೆಡ್ ಸ್ಟೇಟ್ಸ್ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷೆ ನಿನಾ, ದುಬೈ ಓಝೋನ್ ಗ್ರೂಪ್ ಸಂಸ್ಥಾಪಕರಾದ ಓವಿಲಿಯಾ ಫೆರ್ನಾಂಡಿಸ್ ಪ್ರಶಸ್ತಿ ಪ್ರದಾನ ಮಾಡಿದರು.</p>.<p><strong>ಕೆಎಸ್ಆರ್ಟಿಸಿಗೆ ಐದು ಪ್ರಶಸ್ತಿ:</strong> ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಜಾಗತಿಕ ಬ್ರ್ಯಾಂಡ್ ಉತ್ಕೃಷ್ಟತೆ ಪ್ರಶಸ್ತಿ, ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ, ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ, ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗಳನ್ನು ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿಗೆ ಪ್ರದಾನ ಮಾಡಲಾಯಿತು.</p>.<p>ಕೆಎಸ್ಆರ್ಟಿಸಿ ಪರವಾಗಿ ವಿಭಾಗೀಯ ತಾಂತ್ರಿಕ ಎಂಜಿನಿಯರ್ ಎಚ್.ಎಸ್. ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯಾ ಸಿ., ಸಹಾಯಕ ಆಡಳಿತಾಧಿಕಾರಿ ಶಿಬಾ ಎಸ್. ಪ್ರಶಸ್ತಿಯನ್ನು ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>