ಬೆಂಗಳೂರು: ಅಂತರ ನಗರ ಸಾರಿಗೆ ವ್ಯವಸ್ಥೆಯನ್ನು ಅತ್ಯುತ್ತಮವಾಗಿ ಕಲ್ಪಿಸಿರುವ ಸರ್ಕಾರಿ ಸಾರಿಗೆ ಸಂಸ್ಥೆಗಳ ವಿಭಾಗದಲ್ಲಿ ಕೆಎಸ್ಆರ್ಟಿಸಿಗೆ ರಾಷ್ಟ್ರೀಯ ಪ್ರವಾಸ್ ಎಕ್ಸಲೆನ್ಸ್ ಪ್ರಶಸ್ತಿ–2019 ದೊರಕಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಮತ್ತು ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ ಪಿ.ಎಸ್. ಹರ್ಷ ಅವರಿಗೆಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮುಂಬೈನಲ್ಲಿ ಶುಕ್ರವಾರ ಪ್ರಶಸ್ತಿ ಪ್ರದಾನ ಮಾಡಿದರು.