<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಭಾರಿ ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಸಮಾಜ ಕಲ್ಯಾಣ ಇಲಾಖೆಯ ಪಿಎಂ–ಅಜಯ್ ಯೋಜನೆಯಡಿ ಈ ತರಬೇತಿ ನೀಡಲಾಗುತ್ತಿದೆ. ಕೆಎಸ್ಆರ್ಟಿಸಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಚಾಲನಾ ತರಬೇತಿ ನಡೆಯಲಿದೆ. </p>.<p>45 ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಒಂದು ತಿಂಗಳ ತರಬೇತಿ ಇದಾಗಿದ್ದು, ವಸತಿ ಮತ್ತು ಊಟ ಉಚಿತವಾಗಿ ಒದಗಿಸಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಪರವಾನಗಿ ಉಚಿತವಾಗಿ ನೀಡಲಾಗುವುದು.</p>.<p>ಅಭ್ಯರ್ಥಿಗಳು ಹತ್ತಿರದ ತರಬೇತಿ ಕೇಂದ್ರದಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಇಲ್ಲವೇ ksrtcjobs.karnataka.gov.inನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವರ ಭರ್ತಿ ಮಾಡಿದವರನ್ನು ಕಚೇರಿಯಿಂದಲೇ ಸಂಪರ್ಕಿಸಲಾಗುವುದು, ಮಾಹಿತಿಗೆ ಮಾಲೂರು: 7760994432, ಚಿಕ್ಕಮಗಳೂರು: 9606037746, ಮಳವಳ್ಳಿ: 7760990137, ಹಾಸನ: 7760990533, ಹೊಳಲ್ಕೆರೆ: 7019072560 ಸಂಪರ್ಕಿಸಬಹುದು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಭಾರಿ ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಸಮಾಜ ಕಲ್ಯಾಣ ಇಲಾಖೆಯ ಪಿಎಂ–ಅಜಯ್ ಯೋಜನೆಯಡಿ ಈ ತರಬೇತಿ ನೀಡಲಾಗುತ್ತಿದೆ. ಕೆಎಸ್ಆರ್ಟಿಸಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಚಾಲನಾ ತರಬೇತಿ ನಡೆಯಲಿದೆ. </p>.<p>45 ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಒಂದು ತಿಂಗಳ ತರಬೇತಿ ಇದಾಗಿದ್ದು, ವಸತಿ ಮತ್ತು ಊಟ ಉಚಿತವಾಗಿ ಒದಗಿಸಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಪರವಾನಗಿ ಉಚಿತವಾಗಿ ನೀಡಲಾಗುವುದು.</p>.<p>ಅಭ್ಯರ್ಥಿಗಳು ಹತ್ತಿರದ ತರಬೇತಿ ಕೇಂದ್ರದಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಇಲ್ಲವೇ ksrtcjobs.karnataka.gov.inನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವರ ಭರ್ತಿ ಮಾಡಿದವರನ್ನು ಕಚೇರಿಯಿಂದಲೇ ಸಂಪರ್ಕಿಸಲಾಗುವುದು, ಮಾಹಿತಿಗೆ ಮಾಲೂರು: 7760994432, ಚಿಕ್ಕಮಗಳೂರು: 9606037746, ಮಳವಳ್ಳಿ: 7760990137, ಹಾಸನ: 7760990533, ಹೊಳಲ್ಕೆರೆ: 7019072560 ಸಂಪರ್ಕಿಸಬಹುದು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>