<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ಸಿಬ್ಬಂದಿಯ ವರ್ಗಾವಣೆಗಾಗಿ ಮತ್ತು ವಜಾಗೊಂಡ ನೌಕರನ ಪುನರ್ ನೇಮಕಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿದ ಕೆಎಸ್ಆರ್ಟಿಸಿ ಲೆಕ್ಕಪತ್ರ ವಿಭಾಗದ ಆಪರೇಟರ್ ರಿಚರ್ಡ್ ಜೆ. ಅವರನ್ನು ಅಮಾನತು ಮಾಡಲಾಗಿದೆ.</p>.<p>ಶಿವಮೊಗ್ಗ ಘಟಕದಲ್ಲಿ ಸಹಾಯಕ ಕುಶಲಕರ್ಮಿಯಾಗಿರುವ ನಾಗರಾಜಪ್ಪ ಅವರನ್ನು ಅವರ ಕೋರಿಕೆಯಂತೆ ದಾವಣಗೆರೆ ವಿಭಾಗಕ್ಕೆ ವರ್ಗಾವಣೆ ಮಾಡಿಸುವುದಾಗಿ ಭರವಸೆ ನೀಡಿ ರಿಚರ್ಡ್ ₹60 ಸಾವಿರ ಪಡೆದಿದ್ದರು. ವಜಾಗೊಂಡಿರುವ ಚಾಲಕ ನಾಗರಾಜ ಎನ್.ಎ. ಅವರನ್ನು ಪುನರ್ ನೇಮಕ ಮಾಡಲು ಮತ್ತು ಕುಂದಾಪುರ ಘಟಕದಲ್ಲಿ ಚಾಲಕರಾಗಿರುವ ಚಂದ್ರಹಾಸ ಎಸ್. ಆಚಾರಿ ಅವರನ್ನು ಶಿವಮೊಗ್ಗ ವಿಭಾಗಕ್ಕೆ ವರ್ಗಾವಣೆ ಮಾಡಲು ₹1.35 ಲಕ್ಷ ಪಡೆದಿದ್ದರು.</p>.<p>ನಕಲಿ ವರ್ಗಾವಣೆ ಮತ್ತು ಪುನರ್ ನೇಮಕಾತಿ ಆದೇಶಗಳನ್ನು ರಿಚರ್ಡ್ ಸೃಷ್ಟಿಸಿದ್ದರು. ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರಾದ ಮುಖ್ಯ ಯಾಂತ್ರಿಕ ಎಂಜಿನಿಯರ್, ಮುಖ್ಯ ಸಂಚಾರ ವ್ಯವಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಹಿಗಳನ್ನು ಸ್ಕ್ಯಾನ್ ಮಾಡಿ ಅವರೇ ತಯಾರಿಸಿದ್ದ ಆದೇಶಗಳಿಗೆ ಲಗತ್ತಿಸಿ ಮುದ್ರಿಸಿದ್ದರು. ಆನಂತರ ಈ ನಕಲಿ ಆದೇಶಗಳನ್ನು ಮೂವರಿಗೆ ಕಳುಹಿಸಿಕೊಟ್ಟಿದ್ದರು. ಇದು ಸಂಸ್ಥೆಯ ನೌಕರರ ನಡತೆ ಮತ್ತು ಶಿಸ್ತು ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ತಿಳಿಸಿ ರಿಚರ್ಡ್ ಅವರನ್ನು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರೂ ಆಗಿರುವ ಶಿಸ್ತುಪಾಲನಾಧಿಕಾರಿ ಕೆ.ಎಂ. ಅಶ್ರಫ್ ಅಮಾನತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಎಸ್ಆರ್ಟಿಸಿ ಸಿಬ್ಬಂದಿಯ ವರ್ಗಾವಣೆಗಾಗಿ ಮತ್ತು ವಜಾಗೊಂಡ ನೌಕರನ ಪುನರ್ ನೇಮಕಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿದ ಕೆಎಸ್ಆರ್ಟಿಸಿ ಲೆಕ್ಕಪತ್ರ ವಿಭಾಗದ ಆಪರೇಟರ್ ರಿಚರ್ಡ್ ಜೆ. ಅವರನ್ನು ಅಮಾನತು ಮಾಡಲಾಗಿದೆ.</p>.<p>ಶಿವಮೊಗ್ಗ ಘಟಕದಲ್ಲಿ ಸಹಾಯಕ ಕುಶಲಕರ್ಮಿಯಾಗಿರುವ ನಾಗರಾಜಪ್ಪ ಅವರನ್ನು ಅವರ ಕೋರಿಕೆಯಂತೆ ದಾವಣಗೆರೆ ವಿಭಾಗಕ್ಕೆ ವರ್ಗಾವಣೆ ಮಾಡಿಸುವುದಾಗಿ ಭರವಸೆ ನೀಡಿ ರಿಚರ್ಡ್ ₹60 ಸಾವಿರ ಪಡೆದಿದ್ದರು. ವಜಾಗೊಂಡಿರುವ ಚಾಲಕ ನಾಗರಾಜ ಎನ್.ಎ. ಅವರನ್ನು ಪುನರ್ ನೇಮಕ ಮಾಡಲು ಮತ್ತು ಕುಂದಾಪುರ ಘಟಕದಲ್ಲಿ ಚಾಲಕರಾಗಿರುವ ಚಂದ್ರಹಾಸ ಎಸ್. ಆಚಾರಿ ಅವರನ್ನು ಶಿವಮೊಗ್ಗ ವಿಭಾಗಕ್ಕೆ ವರ್ಗಾವಣೆ ಮಾಡಲು ₹1.35 ಲಕ್ಷ ಪಡೆದಿದ್ದರು.</p>.<p>ನಕಲಿ ವರ್ಗಾವಣೆ ಮತ್ತು ಪುನರ್ ನೇಮಕಾತಿ ಆದೇಶಗಳನ್ನು ರಿಚರ್ಡ್ ಸೃಷ್ಟಿಸಿದ್ದರು. ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರಾದ ಮುಖ್ಯ ಯಾಂತ್ರಿಕ ಎಂಜಿನಿಯರ್, ಮುಖ್ಯ ಸಂಚಾರ ವ್ಯವಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಹಿಗಳನ್ನು ಸ್ಕ್ಯಾನ್ ಮಾಡಿ ಅವರೇ ತಯಾರಿಸಿದ್ದ ಆದೇಶಗಳಿಗೆ ಲಗತ್ತಿಸಿ ಮುದ್ರಿಸಿದ್ದರು. ಆನಂತರ ಈ ನಕಲಿ ಆದೇಶಗಳನ್ನು ಮೂವರಿಗೆ ಕಳುಹಿಸಿಕೊಟ್ಟಿದ್ದರು. ಇದು ಸಂಸ್ಥೆಯ ನೌಕರರ ನಡತೆ ಮತ್ತು ಶಿಸ್ತು ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ತಿಳಿಸಿ ರಿಚರ್ಡ್ ಅವರನ್ನು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರೂ ಆಗಿರುವ ಶಿಸ್ತುಪಾಲನಾಧಿಕಾರಿ ಕೆ.ಎಂ. ಅಶ್ರಫ್ ಅಮಾನತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>