<p><strong>ಬೆಂಗಳೂರು</strong>: ‘ಕೆಎಸ್ಆರ್ಟಿಸಿ ಬಸ್ ಚಾಲಕರು, ನಿರ್ವಾಹಕರ ಮೇಲೆ ದಾಖಲಿಸಿರುವ ಮೊಕದ್ದಮೆಗಳನ್ನು ರಾಜ್ಯ ಸರ್ಕಾರವು ಹಿಂದಕ್ಕೆ ಪಡೆಯಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ ಆಗ್ರಹಿಸಿದರು.</p>.<p>ನಿಗಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಪರ್ಯಾಯ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಕೆಲವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ನೌಕರರನ್ನು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿತ್ತು’ ಎಂದರು.<br />‘ಕೆಎಸ್ಆರ್ಟಿಸಿಯನ್ನು ಖಾಸಗೀಕರ ಣಗೊಳಿಸುವ ಹುನ್ನಾರ ನಡೆಯುತ್ತಿದೆ. ಸಾರ್ವಜನಿಕ ಉದ್ದಿಮೆಗಳು ಉಳಿಯ ಬೇಕು. ಅವುಗಳ ಅಭಿವೃದ್ಧಿಯಿಂದ ಕಲ್ಯಾಣ ರಾಜ್ಯ ಸಾಧ್ಯವಾಗಲಿದೆ. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು’ ಎಂದು ಆಗ್ರಹಿಸಿದರು.</p>.<p>‘ರಾಜ್ಯದಲ್ಲಿ ನಿಗಮಕ್ಕೆ ಸೇರಿದ 3,700 ಎಕರೆಯಷ್ಟು ಆಸ್ತಿಯಿದೆ. ನಿಗಮದ ಅಭಿವೃದ್ಧಿ ಕಾರ್ಯಕ್ಕೆ ಬೆಂಗಳೂರಿನಲ್ಲಿ 1,200 ಎಕರೆ ಗುರುತಿಸಲಾಗಿತ್ತು. ಅದನ್ನು ಅದಾನಿಗೆ ಕೊಡುವುದಾಗಿ ಸಂಸದರೊಬ್ಬರು ಹೇಳಿದ್ದಾರೆ. ಯಾವ ಕಾರಣಕ್ಕೂ ಈ ಕೆಲಸ ನಡೆಯಬಾರದು’ ಎಂದು ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಅಂಬೇಡ್ಕರ್ ಜಾತಿ ಹಾಗೂ ಹಸಿವು ಮುಕ್ತ ಭಾರತ ನಿರ್ಮಿಸುವ ಕನಸು ಕಂಡಿದ್ದರು. ಆ ನಿಟ್ಟಿನಲ್ಲಿ ಪ್ರಬುದ್ಧ ಹಾಗೂ ವೈಚಾರಿಕ ಭಾರತ ನಿರ್ಮಿಸಬೇಕಿದೆ’ ಎಂದು ನುಡಿದರು.</p>.<p>ಮೈಸೂರಿನ ಉರಿಲಿಂಗ ಪೆದ್ದೀಶ್ವರ ಸಂಸ್ಥಾನ ಶಾಖಾ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಎಸ್.ಉಮೇಶ್, ಶಾಖಾ ಮಾರುತಿ, ಎಸ್.ಶ್ರೀನಿವಾಸ, ಎಚ್.ದಿವಾಕರ್, ಎಂ,ಜಗದೀಶ್, ಲಕ್ಷ್ಮಣ್ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೆಎಸ್ಆರ್ಟಿಸಿ ಬಸ್ ಚಾಲಕರು, ನಿರ್ವಾಹಕರ ಮೇಲೆ ದಾಖಲಿಸಿರುವ ಮೊಕದ್ದಮೆಗಳನ್ನು ರಾಜ್ಯ ಸರ್ಕಾರವು ಹಿಂದಕ್ಕೆ ಪಡೆಯಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ ಆಗ್ರಹಿಸಿದರು.</p>.<p>ನಿಗಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಪರ್ಯಾಯ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಕೆಲವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ನೌಕರರನ್ನು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿತ್ತು’ ಎಂದರು.<br />‘ಕೆಎಸ್ಆರ್ಟಿಸಿಯನ್ನು ಖಾಸಗೀಕರ ಣಗೊಳಿಸುವ ಹುನ್ನಾರ ನಡೆಯುತ್ತಿದೆ. ಸಾರ್ವಜನಿಕ ಉದ್ದಿಮೆಗಳು ಉಳಿಯ ಬೇಕು. ಅವುಗಳ ಅಭಿವೃದ್ಧಿಯಿಂದ ಕಲ್ಯಾಣ ರಾಜ್ಯ ಸಾಧ್ಯವಾಗಲಿದೆ. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು’ ಎಂದು ಆಗ್ರಹಿಸಿದರು.</p>.<p>‘ರಾಜ್ಯದಲ್ಲಿ ನಿಗಮಕ್ಕೆ ಸೇರಿದ 3,700 ಎಕರೆಯಷ್ಟು ಆಸ್ತಿಯಿದೆ. ನಿಗಮದ ಅಭಿವೃದ್ಧಿ ಕಾರ್ಯಕ್ಕೆ ಬೆಂಗಳೂರಿನಲ್ಲಿ 1,200 ಎಕರೆ ಗುರುತಿಸಲಾಗಿತ್ತು. ಅದನ್ನು ಅದಾನಿಗೆ ಕೊಡುವುದಾಗಿ ಸಂಸದರೊಬ್ಬರು ಹೇಳಿದ್ದಾರೆ. ಯಾವ ಕಾರಣಕ್ಕೂ ಈ ಕೆಲಸ ನಡೆಯಬಾರದು’ ಎಂದು ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಅಂಬೇಡ್ಕರ್ ಜಾತಿ ಹಾಗೂ ಹಸಿವು ಮುಕ್ತ ಭಾರತ ನಿರ್ಮಿಸುವ ಕನಸು ಕಂಡಿದ್ದರು. ಆ ನಿಟ್ಟಿನಲ್ಲಿ ಪ್ರಬುದ್ಧ ಹಾಗೂ ವೈಚಾರಿಕ ಭಾರತ ನಿರ್ಮಿಸಬೇಕಿದೆ’ ಎಂದು ನುಡಿದರು.</p>.<p>ಮೈಸೂರಿನ ಉರಿಲಿಂಗ ಪೆದ್ದೀಶ್ವರ ಸಂಸ್ಥಾನ ಶಾಖಾ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಎಸ್.ಉಮೇಶ್, ಶಾಖಾ ಮಾರುತಿ, ಎಸ್.ಶ್ರೀನಿವಾಸ, ಎಚ್.ದಿವಾಕರ್, ಎಂ,ಜಗದೀಶ್, ಲಕ್ಷ್ಮಣ್ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>