ಬೆಂಗಳೂರು: ನಿಗಮದ ಚಾಲಕ, ಚಾಲಕ–ಕಂ–ನಿರ್ವಾಹಕ, ತಾಂತ್ರಿಕ ಸಹಾಯಕ, ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್ಆರ್ಟಿಸಿ ಸ್ಥಗಿತಗೊಳಿಸಿದೆ.
ಕೋವಿಡ್ ಕಾರಣದಿಂದ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ. ಪ್ರಕ್ರಿಯೆ ಆರಂಭವಾದ ನಂತರ ಮಾಹಿತಿಯನ್ನು ನಿಗಮದ ವೆಬ್ಸೈಟ್ www.ksrtcjobs.karnataka.gov.in ಪ್ರಕಟಿಸಲಾಗುವುದು ಎಂದು ಕೆಎಸ್ಆರ್ಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.