<p><strong>ಬೆಂಗಳೂರು: </strong>ಸಾರಿಗೆ ಸಚಿವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಕೈಗೊಂಡ ತೀರ್ಮಾನದ ಪ್ರಕಾರ ಮುಷ್ಕರ ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಎಐಟಿಯುಸಿ ಸಂಯೋಜಿತ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ತನ್ನ ಸದಸ್ಯರಿಗೆ ಸೂಚನೆ ನೀಡಿದೆ.</p>.<p>ಭಾನುವಾರ ರಾತ್ರಿ ಸುತ್ತೋಲೆ ಹೊರಡಿಸಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿಡಿ.ಎ. ವಿಜಯಭಾಸ್ಕರ್, ‘ಮುಷ್ಕರ ಅಂತ್ಯಗೊಳಿಸುವ ಸಂಬಂಧ ಸಾರಿಗೆ ಸಚಿವರು ಎಲ್ಲಾ ಕಾರ್ಮಿಕ ಸಂಘಟನೆಗಳ ಜತೆ ಎರಡನೆ ಬಾರಿ ಸಭೆ ನಡೆಸಿದ್ದರು. ಎಂಟು ಬೇಡಿಕೆಗಳ ಈಡೇರಿಕೆಗೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಈ ಪೈಕಿ ಏಳು ಬೇಡಿಕೆಗಳ ಈಡೇರಿಕೆಯನ್ನು ಎಲ್ಲ ಕಾರ್ಮಿಕ ಸಂಘಟನೆಗಳ ಮುಖಂಡರು ಒಪ್ಪಿಕೊಂಡಿದ್ದು, ನೌಕರರು ಕರ್ತವ್ಯಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದೆವು‘ ಎಂದು ತಿಳಿಸಿದ್ದಾರೆ.</p>.<p>‘ಆರನೇ ವೇತನ ಆಯೋಗದ ಶಿಫಾರಸು ಜಾರಿಯ ವಿಚಾರವನ್ನು ನಾವು ಒಪ್ಪಿಲ್ಲ. ಈ ಹಿಂದಿನಂತೆ ನಾಲ್ಕು ವರ್ಷಗಳಿಗೊಮ್ಮೆ ಕೈಗಾರಿಕಾ ಒಪ್ಪಂದದ ಮೂಲಕ ವೇತನ ಪರಿಷ್ಕರಿಸುವ ಪದ್ಧತಿ ಮುಂದುವರಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಈ ಕುರಿತು ಎಲ್ಲ ಕಾರ್ಮಿಕ ಸಂಘಟನೆಗಳು ಆಕ್ಷೇಪ ದಾಖಲಿಸಿವೆ‘ ಎಂದು ಹೇಳಿದ್ದಾರೆ.</p>.<p>ಮುಷ್ಕರ ಅಂತ್ಯಗೊಳಿಸುವ ಕುರಿತು ಸಾರಿಗೆ ನೌಕರರ ಕೂಟದ ಪ್ರತಿನಿಧಿಗಳ ಜತೆ ಸಚಿವರು ಮಾತುಕತೆ ನಡೆಸಿದ್ದರು. ಮುಷ್ಕರ ಅಂತ್ಯಗೊಳಿಸಲು ಕೂಟದ ಪದಾಧಿಕಾರಿಗಳು ಒಪ್ಪಿಕೊಂಡಿದ್ದರು ಎಂಬ ಮಾಹಿತಿ ಲಭಿಸಿತ್ತು. ಆ ಬಳಿಕ ಅವರು ನಿಲುವು ಬದಲಿಸಿದ್ದಾರೆ. ಮುಷ್ಕರ ಮುಂದುವರಿಸುವ ನಿರ್ಧಾರಕ್ಕೂ ಫೆಡರೇಷನ್ಗೂ ಸಂಬಂಧವಿಲ್ಲ. ಸಭೆಯಲ್ಲಿ ನಿರ್ಧಾರವಾದಂತೆ ಎಲ್ಲರೂ ಕೆಲಸಕ್ಕೆ ಹಾಜರಾಗಬೇಕು ಎಂದು ಸಂಘಟನೆಯ ಸದಸ್ಯರಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರಿಗೆ ಸಚಿವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಕೈಗೊಂಡ ತೀರ್ಮಾನದ ಪ್ರಕಾರ ಮುಷ್ಕರ ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಎಐಟಿಯುಸಿ ಸಂಯೋಜಿತ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ತನ್ನ ಸದಸ್ಯರಿಗೆ ಸೂಚನೆ ನೀಡಿದೆ.</p>.<p>ಭಾನುವಾರ ರಾತ್ರಿ ಸುತ್ತೋಲೆ ಹೊರಡಿಸಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿಡಿ.ಎ. ವಿಜಯಭಾಸ್ಕರ್, ‘ಮುಷ್ಕರ ಅಂತ್ಯಗೊಳಿಸುವ ಸಂಬಂಧ ಸಾರಿಗೆ ಸಚಿವರು ಎಲ್ಲಾ ಕಾರ್ಮಿಕ ಸಂಘಟನೆಗಳ ಜತೆ ಎರಡನೆ ಬಾರಿ ಸಭೆ ನಡೆಸಿದ್ದರು. ಎಂಟು ಬೇಡಿಕೆಗಳ ಈಡೇರಿಕೆಗೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಈ ಪೈಕಿ ಏಳು ಬೇಡಿಕೆಗಳ ಈಡೇರಿಕೆಯನ್ನು ಎಲ್ಲ ಕಾರ್ಮಿಕ ಸಂಘಟನೆಗಳ ಮುಖಂಡರು ಒಪ್ಪಿಕೊಂಡಿದ್ದು, ನೌಕರರು ಕರ್ತವ್ಯಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದೆವು‘ ಎಂದು ತಿಳಿಸಿದ್ದಾರೆ.</p>.<p>‘ಆರನೇ ವೇತನ ಆಯೋಗದ ಶಿಫಾರಸು ಜಾರಿಯ ವಿಚಾರವನ್ನು ನಾವು ಒಪ್ಪಿಲ್ಲ. ಈ ಹಿಂದಿನಂತೆ ನಾಲ್ಕು ವರ್ಷಗಳಿಗೊಮ್ಮೆ ಕೈಗಾರಿಕಾ ಒಪ್ಪಂದದ ಮೂಲಕ ವೇತನ ಪರಿಷ್ಕರಿಸುವ ಪದ್ಧತಿ ಮುಂದುವರಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಈ ಕುರಿತು ಎಲ್ಲ ಕಾರ್ಮಿಕ ಸಂಘಟನೆಗಳು ಆಕ್ಷೇಪ ದಾಖಲಿಸಿವೆ‘ ಎಂದು ಹೇಳಿದ್ದಾರೆ.</p>.<p>ಮುಷ್ಕರ ಅಂತ್ಯಗೊಳಿಸುವ ಕುರಿತು ಸಾರಿಗೆ ನೌಕರರ ಕೂಟದ ಪ್ರತಿನಿಧಿಗಳ ಜತೆ ಸಚಿವರು ಮಾತುಕತೆ ನಡೆಸಿದ್ದರು. ಮುಷ್ಕರ ಅಂತ್ಯಗೊಳಿಸಲು ಕೂಟದ ಪದಾಧಿಕಾರಿಗಳು ಒಪ್ಪಿಕೊಂಡಿದ್ದರು ಎಂಬ ಮಾಹಿತಿ ಲಭಿಸಿತ್ತು. ಆ ಬಳಿಕ ಅವರು ನಿಲುವು ಬದಲಿಸಿದ್ದಾರೆ. ಮುಷ್ಕರ ಮುಂದುವರಿಸುವ ನಿರ್ಧಾರಕ್ಕೂ ಫೆಡರೇಷನ್ಗೂ ಸಂಬಂಧವಿಲ್ಲ. ಸಭೆಯಲ್ಲಿ ನಿರ್ಧಾರವಾದಂತೆ ಎಲ್ಲರೂ ಕೆಲಸಕ್ಕೆ ಹಾಜರಾಗಬೇಕು ಎಂದು ಸಂಘಟನೆಯ ಸದಸ್ಯರಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>