ಭಾನುವಾರ ರಾತ್ರಿ ಸುತ್ತೋಲೆ ಹೊರಡಿಸಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿಡಿ.ಎ. ವಿಜಯಭಾಸ್ಕರ್, ‘ಮುಷ್ಕರ ಅಂತ್ಯಗೊಳಿಸುವ ಸಂಬಂಧ ಸಾರಿಗೆ ಸಚಿವರು ಎಲ್ಲಾ ಕಾರ್ಮಿಕ ಸಂಘಟನೆಗಳ ಜತೆ ಎರಡನೆ ಬಾರಿ ಸಭೆ ನಡೆಸಿದ್ದರು. ಎಂಟು ಬೇಡಿಕೆಗಳ ಈಡೇರಿಕೆಗೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಈ ಪೈಕಿ ಏಳು ಬೇಡಿಕೆಗಳ ಈಡೇರಿಕೆಯನ್ನು ಎಲ್ಲ ಕಾರ್ಮಿಕ ಸಂಘಟನೆಗಳ ಮುಖಂಡರು ಒಪ್ಪಿಕೊಂಡಿದ್ದು, ನೌಕರರು ಕರ್ತವ್ಯಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದೆವು‘ ಎಂದು ತಿಳಿಸಿದ್ದಾರೆ.