ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗ ನಿಗಮ: ಬುಡಕಟ್ಟು ಜಾತಿಗಳ ನಿರ್ನಾಮದ ನಿರ್ಣಯ -ಕುಂಚಿಟಿಗ ಯುವಶಕ್ತಿ

Last Updated 18 ಜುಲೈ 2021, 16:00 IST
ಅಕ್ಷರ ಗಾತ್ರ

ಬೆಂಗಳೂರು: ‘ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಸಣ್ಣ ಜಾತಿಗಳು, ಪಶುಪಾಲನಾ ಬುಡಕಟ್ಟು ಜನಾಂಗಗಳನ್ನು ನಾಶ ಮಾಡುವಂತಹ ನಿರ್ಣಯವನ್ನು ರಾಜ್ಯ ಸರ್ಕಾರ ಕೈಗೊಂಡಿದೆ’ ಎಂದು ವಿಶ್ವ ಕುಂಚಿಟಿಗ ಯುವಶಕ್ತಿ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

‘ಪ್ರವರ್ಗ 3ಎ ಅಡಿಯಲ್ಲಿ ಬರುವ ಒಕ್ಕಲಿಗ ಜಾತಿಯನ್ನು ಪ್ರಧಾನವಾಗಿ ಬಿಂಬಿಸಿ, ಪ್ರವರ್ಗ 3ರ ಅಡಿಯಲ್ಲಿ ಬರುವ ಕುಂಚಿಟಿಗ ಜಾತಿಯನ್ನು ಒಕ್ಕಲಿಗರ ಉಪಜಾತಿ ಎಂದು ಹೇಳಲಾಗಿದೆ. ಇದು ಅತ್ಯಂತ ಖಂಡನೀಯ’ ಎಂದು ಸಂಘಟನೆ ಹೇಳಿದೆ.

‘ಕುಂಚಿಟಿಗರಲ್ಲಿ ಇಂದಿಗೂ ಬುಡಕಟ್ಟು ಆಚರಣೆಗಳು ಜೀವಂತವಾಗಿವೆ. ರಾಜ್ಯಸರ್ಕಾರ ಕೂಡಲೇ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್‌ ಜಾರಿ ಮಾಡಬೇಕು. ಒಕ್ಕಲಿಗ ಉಪಜಾತಿ ಎನ್ನುವ ಆದೇಶವನ್ನು ರದ್ದು ಮಾಡಬೇಕು. ಇದಕ್ಕೆ ತಪ್ಪಿದರೆ ರಾಜ್ಯದಾದ್ಯಂತ ಹೋರಾಟ ನಡೆಸುವುದರ ಜೊತೆಗೆ, ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ’ ಎಂದು ಸಂಘಟನೆಯು ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT