‘ಕುಂಚಿಟಿಗರಲ್ಲಿ ಇಂದಿಗೂ ಬುಡಕಟ್ಟು ಆಚರಣೆಗಳು ಜೀವಂತವಾಗಿವೆ. ರಾಜ್ಯಸರ್ಕಾರ ಕೂಡಲೇ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ ಜಾರಿ ಮಾಡಬೇಕು. ಒಕ್ಕಲಿಗ ಉಪಜಾತಿ ಎನ್ನುವ ಆದೇಶವನ್ನು ರದ್ದು ಮಾಡಬೇಕು. ಇದಕ್ಕೆ ತಪ್ಪಿದರೆ ರಾಜ್ಯದಾದ್ಯಂತ ಹೋರಾಟ ನಡೆಸುವುದರ ಜೊತೆಗೆ, ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ’ ಎಂದು ಸಂಘಟನೆಯು ಎಚ್ಚರಿಕೆ ನೀಡಿದೆ.