<p class="Briefhead"><strong>‘ಸೇತುವೆ ಕಾಮಗಾರಿ ಪ್ರಾರಂಭಿಸಿ’</strong></p>.<p>ವಿಜಯನಗರ ವಿಧಾನಸಭೆ ಕ್ಷೇತ್ರದ ಕೆಂಪಾಪುರ ವಾರ್ಡ್ ಸಂಖ್ಯೆ 122ರ ಗುರುಕುಲ ಶಾಲೆಯ ಸಮೀಪದ 9ನೇ ಅಡ್ಡರಸ್ತೆಯಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ಆರು ತಿಂಗಳಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ, ವಾಹನ ಸಂಚಾರಕ್ಕೆ ಸಮಸ್ಯೆ ಆಗಿದೆ. ಈ ರಸ್ತೆಯಲ್ಲಿ ರಾಜಕಾಲುವೆಯ ಮೇಲೆ ಸೇತುವೆ ಕಾಮಗಾರಿ ಪ್ರಾರಂಭಿಸಲಾಗಿತ್ತು. ರಸ್ತೆಯನ್ನು ಅಗೆದು ಹಾಗೆಯೇ ಬಿಡಲಾಗಿದೆ. ರಾಜಕಾಲುವೆಯ ನೀರು ಕಟ್ಟಿಕೊಂಡು ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ಬಿಬಿಎಂಪಿ ಕೂಡಲೇ ಇಲ್ಲಿನ ಕಾಮಗಾರಿ ಪ್ರಾರಂಭಿಸಿ ಸಮಸ್ಯೆಗೆ ಮುಕ್ತಿ ಹಾಡಬೇಕು.</p>.<p>।ಎಂ. ಉಮಾಶಂಕರಬಾಬು, ಕೆಂಪಾಪುರ ಅಗ್ರಹಾರ, ಮಾಗಡಿ ರಸ್ತೆ</p>.<p>--</p>.<p class="Briefhead"><strong>‘ರಸ್ತೆ ಗುಂಡಿ ಮುಚ್ಚಿ’</strong></p>.<p>ಹೈದರಾಬಾದ್, ಬಳ್ಳಾರಿ ಮತ್ತು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎಸ್ಟೀಮ್ ಮಾಲ್ ಮುಂಭಾಗದ ಹೆಬ್ಬಾಳ ಕೆಂಪಾಪುರ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ರಸ್ತೆಯಲ್ಲ ಹಾಳಾಗಿದೆ. ಈ ಭಾಗದ ಪ್ರಮುಖ ಬಡಾವಣೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿದ್ದು, ವಾಹನ ಸಂಚಾರಕ್ಕೆ ಅನನುಕೂಲವಾಗಿದೆ. ರಸ್ತೆಯಲ್ಲಿರುವ ಗುಂಡಿಗಳಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಚ್ಚು ಅಪಾಯವಿದ್ದು, ಅನಾಹುತಗಳು ಸಂಭವಿಸುವ ಮುನ್ನ ರಸ್ತೆ ದುರಸ್ತಿಗೊಳಿಸುವ ಅಗತ್ಯವಿದೆ. ಈ ಬಗ್ಗೆ ಬಿಬಿಎಂಪಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈ ಬಗ್ಗೆ ಯಾರು ಸ್ಪಂದಿಸುತ್ತಿಲ್ಲ. ಕೂಡಲೇ ರಸ್ತೆ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. </p>.<p>।ಎಸ್. ಶಿವಪ್ರಸಾದ್, ಹೆಬ್ಬಾಳ</p>.<p>––</p>.<p class="Briefhead"><strong>‘ಪ್ರಾಣಿದಯಾ ಸಂಘ ಸ್ಥಳಾಂತರಿಸಿ’</strong></p>.<p>ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಸಂಖ್ಯೆ 130ಕ್ಕೆ ಸೇರಿದ ಕೆಂಗೇರಿ ಉಪನಗರದ 7ನೇ ಮುಖ್ಯರಸ್ತೆ ಸುಭಾಷ್ನಗರದಲ್ಲಿರುವ ಪ್ರಾಣಿದಯಾ ಸಂಘದವರ ಪ್ರಾಣಿಗಳ ಪೋಷಣಾ ಕೇಂದ್ರವಿದೆ. ಇದರಿಂದ, ವೃದ್ಧರು, ಮಕ್ಕಳು, ಕೆಲಸಕ್ಕೆ ಹೋಗುವ ನೌಕರರಿಗೆ ಸರಿಯಾಗಿ ನಿದ್ರೆ ಮಾಡಲು ಆಗುತ್ತಿಲ್ಲ. ಹಿಂದೆ ಈ ಪ್ರದೇಶದಲ್ಲಿ ಜನಸಂಖ್ಯೆ ಕಡಿಮೆ ಇತ್ತು. ಈಗ ಜನಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಇಲ್ಲಿನ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗುತ್ತಿದೆ. ಬಿಬಿಎಂಪಿ ಕೂಡಲೇ ಈ ಕೇಂದ್ರವನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು.</p>.<p>।ಆರ್. ಕೃಷ್ಣಮೂರ್ತಿ, ಸುಭಾಷ್ನಗರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead"><strong>‘ಸೇತುವೆ ಕಾಮಗಾರಿ ಪ್ರಾರಂಭಿಸಿ’</strong></p>.<p>ವಿಜಯನಗರ ವಿಧಾನಸಭೆ ಕ್ಷೇತ್ರದ ಕೆಂಪಾಪುರ ವಾರ್ಡ್ ಸಂಖ್ಯೆ 122ರ ಗುರುಕುಲ ಶಾಲೆಯ ಸಮೀಪದ 9ನೇ ಅಡ್ಡರಸ್ತೆಯಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ಆರು ತಿಂಗಳಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ, ವಾಹನ ಸಂಚಾರಕ್ಕೆ ಸಮಸ್ಯೆ ಆಗಿದೆ. ಈ ರಸ್ತೆಯಲ್ಲಿ ರಾಜಕಾಲುವೆಯ ಮೇಲೆ ಸೇತುವೆ ಕಾಮಗಾರಿ ಪ್ರಾರಂಭಿಸಲಾಗಿತ್ತು. ರಸ್ತೆಯನ್ನು ಅಗೆದು ಹಾಗೆಯೇ ಬಿಡಲಾಗಿದೆ. ರಾಜಕಾಲುವೆಯ ನೀರು ಕಟ್ಟಿಕೊಂಡು ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ಬಿಬಿಎಂಪಿ ಕೂಡಲೇ ಇಲ್ಲಿನ ಕಾಮಗಾರಿ ಪ್ರಾರಂಭಿಸಿ ಸಮಸ್ಯೆಗೆ ಮುಕ್ತಿ ಹಾಡಬೇಕು.</p>.<p>।ಎಂ. ಉಮಾಶಂಕರಬಾಬು, ಕೆಂಪಾಪುರ ಅಗ್ರಹಾರ, ಮಾಗಡಿ ರಸ್ತೆ</p>.<p>--</p>.<p class="Briefhead"><strong>‘ರಸ್ತೆ ಗುಂಡಿ ಮುಚ್ಚಿ’</strong></p>.<p>ಹೈದರಾಬಾದ್, ಬಳ್ಳಾರಿ ಮತ್ತು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎಸ್ಟೀಮ್ ಮಾಲ್ ಮುಂಭಾಗದ ಹೆಬ್ಬಾಳ ಕೆಂಪಾಪುರ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ರಸ್ತೆಯಲ್ಲ ಹಾಳಾಗಿದೆ. ಈ ಭಾಗದ ಪ್ರಮುಖ ಬಡಾವಣೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿದ್ದು, ವಾಹನ ಸಂಚಾರಕ್ಕೆ ಅನನುಕೂಲವಾಗಿದೆ. ರಸ್ತೆಯಲ್ಲಿರುವ ಗುಂಡಿಗಳಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಚ್ಚು ಅಪಾಯವಿದ್ದು, ಅನಾಹುತಗಳು ಸಂಭವಿಸುವ ಮುನ್ನ ರಸ್ತೆ ದುರಸ್ತಿಗೊಳಿಸುವ ಅಗತ್ಯವಿದೆ. ಈ ಬಗ್ಗೆ ಬಿಬಿಎಂಪಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈ ಬಗ್ಗೆ ಯಾರು ಸ್ಪಂದಿಸುತ್ತಿಲ್ಲ. ಕೂಡಲೇ ರಸ್ತೆ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. </p>.<p>।ಎಸ್. ಶಿವಪ್ರಸಾದ್, ಹೆಬ್ಬಾಳ</p>.<p>––</p>.<p class="Briefhead"><strong>‘ಪ್ರಾಣಿದಯಾ ಸಂಘ ಸ್ಥಳಾಂತರಿಸಿ’</strong></p>.<p>ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಸಂಖ್ಯೆ 130ಕ್ಕೆ ಸೇರಿದ ಕೆಂಗೇರಿ ಉಪನಗರದ 7ನೇ ಮುಖ್ಯರಸ್ತೆ ಸುಭಾಷ್ನಗರದಲ್ಲಿರುವ ಪ್ರಾಣಿದಯಾ ಸಂಘದವರ ಪ್ರಾಣಿಗಳ ಪೋಷಣಾ ಕೇಂದ್ರವಿದೆ. ಇದರಿಂದ, ವೃದ್ಧರು, ಮಕ್ಕಳು, ಕೆಲಸಕ್ಕೆ ಹೋಗುವ ನೌಕರರಿಗೆ ಸರಿಯಾಗಿ ನಿದ್ರೆ ಮಾಡಲು ಆಗುತ್ತಿಲ್ಲ. ಹಿಂದೆ ಈ ಪ್ರದೇಶದಲ್ಲಿ ಜನಸಂಖ್ಯೆ ಕಡಿಮೆ ಇತ್ತು. ಈಗ ಜನಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಇಲ್ಲಿನ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗುತ್ತಿದೆ. ಬಿಬಿಎಂಪಿ ಕೂಡಲೇ ಈ ಕೇಂದ್ರವನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು.</p>.<p>।ಆರ್. ಕೃಷ್ಣಮೂರ್ತಿ, ಸುಭಾಷ್ನಗರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>