ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಹೋಮ, ಹವನ, ಅರ್ಚನೆ, ಮಹಾಮಂಗಳಾರತಿ, ಪುಷ್ಪಾರ್ಚನೆ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಭಕ್ತರು ತಮ್ಮ ಎತ್ತುಗಳನ್ನು ಸಿಂಗರಿಸಿ ವಾದ್ಯ ಮೇಳಗಳೊಂದಿಗೆ ದೇವಸ್ಥಾನದ ಪ್ರದಕ್ಷಿಣೆ ಹಾಕಿದರು. ಬಸವೇಶ್ವರ ಸ್ವಾಮಿಯನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು.