ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, 'ಎಸ್.ಟಿ ಮೀಸಲಾತಿ ಬೇಕು' ಎಂದು ಘೋಷಣೆ ಕೂಗುತ್ತಿದ್ದಾರೆ.
ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
'ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇದುವರೆಗೂ ಅಂಗೀಕರಿಸಿಲ್ಲ' ಎಂದು ಪ್ರತಿಭಟನಾಕಾರರು ದೂರಿದರು.