ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಣರಹಿತವಾಗಿ ಕುರುಬರ ಅಭಿವೃದ್ಧಿ: ಜಿ. ಕೃಷ್ಣ

Last Updated 27 ಜೂನ್ 2020, 19:28 IST
ಅಕ್ಷರ ಗಾತ್ರ

ಬೆಂಗಳೂರು: ‘ಕುರುಬರ ಸಂಘದಲ್ಲಿ ಬಣಗಳನ್ನು ಹುಟ್ಟುಹಾಕದೆ ಭಿನ್ನಾಭಿಪ್ರಾಯರಹಿತವಾಗಿ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತೇವೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಅಧ್ಯಕ್ಷ ಜಿ. ಕೃಷ್ಣ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಕುರುಬ ಸಮಾಜದ ಶಾಲೆ,ಕಾಲೇಜುಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ತೆರಳಿಸಂಘದ ಚಟುವಟಿಕೆ ಚುರುಕುಗೊಳಿಸಲಾಗುವುದು’ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿಡಿ.ವೆಂಕಟೇಶಮೂರ್ತಿ, ‘ಚುನಾವಣೆ ತನಕ ಸಂಘದಲ್ಲಿ ಬಣಗಳು ಇರುವುದು ಸಹಜ. ಸಮಾಜ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಒಟ್ಟಾಗಿ ಮುಂದುವರಿಯುವ ಆಗತ್ಯವಿದ್ದು,ನಮ್ಮಲ್ಲಿ ಯಾವುದೇ ರೀತಿಯ ಬಣವಿಲ್ಲ.ಎಲ್ಲ ನಾಯಕರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ’ ಎಂದರು.

ಈ ಹಿಂದಿನ ಕಾರ್ಯಾಧ್ಯಕ್ಷ ಶಾಂತಪ್ಪ, ‘ಕುರುಬ ಸಮಾಜ ಒಂದು ಪಕ್ಷಕ್ಕೆ ಸೀಮಿತಗೊಳ್ಳದೆ ಎಲ್ಲಾ ಪಕ್ಷದ ಜತೆ ಸಮನ್ವಯ ಕಾಪಾಡಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT