<p><strong>ಬೆಂಗಳೂರು:</strong>ರಾಜ್ಯ ಕುರುಬರ ಸಂಘದ ಅಧ್ಯಕ್ಷರಾಗಿ ಜಿ. ಕೃಷ್ಣ ಹಾಗೂ ಬಿಬಿಎಂಪಿಯ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.</p>.<p>ಕಾರ್ಯಾಧ್ಯಕ್ಷರಾಗಿ ಸುಬ್ರಹ್ಮಣ್ಯ ಮತ್ತು ಖಜಾಂಚಿಯಾಗಿ ದೇವರಾಜ್ ಚುನಾಯಿತರಾಗಿದ್ದಾರೆ.</p>.<p>ಪದಾಧಿಕಾರಿಗಳ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣ ಭಾರೀ ಗೆಲುವು ಸಾಧಿಸಿದೆ.</p>.<p>ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಸಚಿವಕೆ.ಎಸ್.ಈಶ್ವರಪ್ಪ ಬಣ ಕೂಡ ಭಾರೀ ಪ್ರಯತ್ನ ನಡೆಸಿತ್ತು. ತೆರೆಮರೆಯಲ್ಲಿ ಸಂಧಾನ ಮಾತುಕತೆಗಳು ನಡೆದಿದ್ದರೂ ಫಲಪ್ರದವಾಗಲಿಲ್ಲ. ಕೊನೆಗೆ, ಸಿದ್ದರಾಮಯ್ಯ ಬಣದ ಮುಖಂಡರೇ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮುಖಂಡರೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯ ಕುರುಬರ ಸಂಘದ ಅಧ್ಯಕ್ಷರಾಗಿ ಜಿ. ಕೃಷ್ಣ ಹಾಗೂ ಬಿಬಿಎಂಪಿಯ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.</p>.<p>ಕಾರ್ಯಾಧ್ಯಕ್ಷರಾಗಿ ಸುಬ್ರಹ್ಮಣ್ಯ ಮತ್ತು ಖಜಾಂಚಿಯಾಗಿ ದೇವರಾಜ್ ಚುನಾಯಿತರಾಗಿದ್ದಾರೆ.</p>.<p>ಪದಾಧಿಕಾರಿಗಳ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣ ಭಾರೀ ಗೆಲುವು ಸಾಧಿಸಿದೆ.</p>.<p>ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಸಚಿವಕೆ.ಎಸ್.ಈಶ್ವರಪ್ಪ ಬಣ ಕೂಡ ಭಾರೀ ಪ್ರಯತ್ನ ನಡೆಸಿತ್ತು. ತೆರೆಮರೆಯಲ್ಲಿ ಸಂಧಾನ ಮಾತುಕತೆಗಳು ನಡೆದಿದ್ದರೂ ಫಲಪ್ರದವಾಗಲಿಲ್ಲ. ಕೊನೆಗೆ, ಸಿದ್ದರಾಮಯ್ಯ ಬಣದ ಮುಖಂಡರೇ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮುಖಂಡರೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>