ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಬರ ಸಂಘ: ಕೃಷ್ಣ ಅಧ್ಯಕ್ಷ

ಸಿದ್ದರಾಮಯ್ಯ ಬಣಕ್ಕೆ ಭಾರೀ ಗೆಲುವು
Last Updated 27 ಜೂನ್ 2020, 4:52 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯ ಕುರುಬರ ಸಂಘದ ಅಧ್ಯಕ್ಷರಾಗಿ ಜಿ. ಕೃಷ್ಣ ಹಾಗೂ ಬಿಬಿಎಂಪಿಯ ಮಾಜಿ ಮೇಯರ್‌ ಡಿ.ವೆಂಕಟೇಶಮೂರ್ತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಸುಬ್ರಹ್ಮಣ್ಯ ಮತ್ತು ಖಜಾಂಚಿಯಾಗಿ ದೇವರಾಜ್‌ ಚುನಾಯಿತರಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣ ಭಾರೀ ಗೆಲುವು ಸಾಧಿಸಿದೆ.

ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಸಚಿವಕೆ.ಎಸ್.ಈಶ್ವರಪ್ಪ ಬಣ ಕೂಡ ಭಾರೀ ಪ್ರಯತ್ನ ನಡೆಸಿತ್ತು. ತೆರೆಮರೆಯಲ್ಲಿ ಸಂಧಾನ ಮಾತುಕತೆಗಳು ನಡೆದಿದ್ದರೂ ಫಲಪ್ರದವಾಗಲಿಲ್ಲ. ಕೊನೆಗೆ, ಸಿದ್ದರಾಮಯ್ಯ ಬಣದ ಮುಖಂಡರೇ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮುಖಂಡರೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT