‘ಸಾಲ ಪಡೆದಿದ್ದವರು ನಿಗದಿತ ದಿನದೊಳಗೆ ಮರುಪಾವತಿ ಮಾಡಿರಲಿಲ್ಲ. ಇದರಿಂದಾಗಿ ಸೊಸೈಟಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಸೊಸೈಟಿಯಲ್ಲಿ ಠೇವಣಿ ಇರಿಸಿದ್ದ ಜನ, ಹಣ ವಾಪಸು ನೀಡುವಂತೆ ಒತ್ತಾಯಿಸಲಾರಂಭಿಸಿದ್ದರು. ಆದರೆ, ಅವರಿಗೆ ಹಣ ನೀಡಿರಲಿಲ್ಲ. ಇದರಿಂದ ಬೇಸತ್ತ ಠೇವಣಿದಾರರು, ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.