<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕನ್ನಡ ಭಾಷೆ ಸಾರ್ವಭೌಮ. ವಲಯವಾರು ಸ್ಥಳೀಯ ಭಾಷೆಗಳು ಆಡಳಿತ ಭಾಷೆಗೆ ಕೊಂಡಿ ಇದ್ದಂತೆ’ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದರು.</p>.<p>ಕುವೆಂಪು ಭಾಷಾಭಾರತಿ ಪ್ರಾಧಿಕಾರವು ಶುಕ್ರವಾರ ಹಮ್ಮಿಕೊಂಡಿದ್ದ ‘ಒಳನುಡಿಗಳ ಒಳ್ನುಡಿ: ಜಾಲಗೋಷ್ಠಿ ಸರಣಿ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕರ್ನಾಟಕದಲ್ಲಿ ಸುಮಾರು 56 ಭಾಷೆಗಳಿವೆ. ಅವುಗಳಲ್ಲಿ ಕುವೆಂಪು ಭಾಷಾ ಪ್ರಾಧಿಕಾರ 13 ಭಾಷೆಗಳ ಬಗ್ಗೆ ಸರಣಿ ಜಾಲಗೋಷ್ಠಿ ಹಮ್ಮಿಕೊಂಡಿದೆ. ವ್ಯವಹಾರ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿಈ ಸ್ಥಳೀಯ ಭಾಷೆಗಳ ಪ್ರಭಾವವನ್ನು ಕಾಣಬಹುದು’ ಎಂದರು.</p>.<p>ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್, ‘ಒಂದು ಭಾಷೆ ಸಮೃದ್ಧವಾಗಿ ಬೆಳೆಯ ಬೇಕಾದರೆ, ಭಾಷೆಗಳ ವಿನಿಮಯದ ಕೆಲಸವಾಗಬೇಕು. ಆಗ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯ’ ಎಂದರು.</p>.<p>‘ಕೊಡವ, ತುಳು ಸೇರಿದಂತೆ ಅನೇಕ ಸ್ಥಳೀಯ ಭಾಷೆಗಳು ಕನ್ನಡಕ್ಕೆ ಅಂಟಿಕೊಂಡಿವೆ. ಅವು ಒಂದಕ್ಕೊಂದು ಬೆಸೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪುಸ್ತಕಗಳನ್ನು ಕೇಂದ್ರೀಕರಿಸಿ, ಕಾರ್ಯಕ್ರಮ ರೂಪಿಸಲಾಗುವುದು’.</p>.<p>‘ಸ್ಥಳೀಯ ಭಾಷೆಗಳು ಹಾಗೂ ಅಲ್ಲಿನ ಸಂಪ್ರದಾಯಗಳ ಬಗ್ಗೆ ಬೆಳಕು ಚೆಲ್ಲುವಂತಹ ಕಾರ್ಯಕ್ರಮಗಳನ್ನು ಪ್ರಾಧಿಕಾರದಿಂದ ರೂಪಿಸಲಾಗುವುದು. ಅದರ ಪೂರ್ವಭಾವಿಯಾಗಿ ಕೊಡವ, ತುಳು, ಕೊಂಕಣಿ, ಕುಂದಾಪುರ ಭಾಷೆಗಳಿಗೆ ಸಂಬಂಧಿಸಿದ ವಿಚಾರಗೋಷ್ಠಿಗಳನ್ನು ಈಗ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಪಾರ್ವತಿ ಅಯ್ಯಪ್ಪ ಹಾಗೂ ಇತರರು ಭಾಗವಹಿಸಿದ್ದರು. ಜಾಲಗೋಷ್ಠಿ ಸರಣಿಯು ಜೂನ್ 2ರವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಕನ್ನಡ ಭಾಷೆ ಸಾರ್ವಭೌಮ. ವಲಯವಾರು ಸ್ಥಳೀಯ ಭಾಷೆಗಳು ಆಡಳಿತ ಭಾಷೆಗೆ ಕೊಂಡಿ ಇದ್ದಂತೆ’ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದರು.</p>.<p>ಕುವೆಂಪು ಭಾಷಾಭಾರತಿ ಪ್ರಾಧಿಕಾರವು ಶುಕ್ರವಾರ ಹಮ್ಮಿಕೊಂಡಿದ್ದ ‘ಒಳನುಡಿಗಳ ಒಳ್ನುಡಿ: ಜಾಲಗೋಷ್ಠಿ ಸರಣಿ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕರ್ನಾಟಕದಲ್ಲಿ ಸುಮಾರು 56 ಭಾಷೆಗಳಿವೆ. ಅವುಗಳಲ್ಲಿ ಕುವೆಂಪು ಭಾಷಾ ಪ್ರಾಧಿಕಾರ 13 ಭಾಷೆಗಳ ಬಗ್ಗೆ ಸರಣಿ ಜಾಲಗೋಷ್ಠಿ ಹಮ್ಮಿಕೊಂಡಿದೆ. ವ್ಯವಹಾರ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿಈ ಸ್ಥಳೀಯ ಭಾಷೆಗಳ ಪ್ರಭಾವವನ್ನು ಕಾಣಬಹುದು’ ಎಂದರು.</p>.<p>ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್, ‘ಒಂದು ಭಾಷೆ ಸಮೃದ್ಧವಾಗಿ ಬೆಳೆಯ ಬೇಕಾದರೆ, ಭಾಷೆಗಳ ವಿನಿಮಯದ ಕೆಲಸವಾಗಬೇಕು. ಆಗ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯ’ ಎಂದರು.</p>.<p>‘ಕೊಡವ, ತುಳು ಸೇರಿದಂತೆ ಅನೇಕ ಸ್ಥಳೀಯ ಭಾಷೆಗಳು ಕನ್ನಡಕ್ಕೆ ಅಂಟಿಕೊಂಡಿವೆ. ಅವು ಒಂದಕ್ಕೊಂದು ಬೆಸೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪುಸ್ತಕಗಳನ್ನು ಕೇಂದ್ರೀಕರಿಸಿ, ಕಾರ್ಯಕ್ರಮ ರೂಪಿಸಲಾಗುವುದು’.</p>.<p>‘ಸ್ಥಳೀಯ ಭಾಷೆಗಳು ಹಾಗೂ ಅಲ್ಲಿನ ಸಂಪ್ರದಾಯಗಳ ಬಗ್ಗೆ ಬೆಳಕು ಚೆಲ್ಲುವಂತಹ ಕಾರ್ಯಕ್ರಮಗಳನ್ನು ಪ್ರಾಧಿಕಾರದಿಂದ ರೂಪಿಸಲಾಗುವುದು. ಅದರ ಪೂರ್ವಭಾವಿಯಾಗಿ ಕೊಡವ, ತುಳು, ಕೊಂಕಣಿ, ಕುಂದಾಪುರ ಭಾಷೆಗಳಿಗೆ ಸಂಬಂಧಿಸಿದ ವಿಚಾರಗೋಷ್ಠಿಗಳನ್ನು ಈಗ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಪಾರ್ವತಿ ಅಯ್ಯಪ್ಪ ಹಾಗೂ ಇತರರು ಭಾಗವಹಿಸಿದ್ದರು. ಜಾಲಗೋಷ್ಠಿ ಸರಣಿಯು ಜೂನ್ 2ರವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>