<p><strong>ಬೆಂಗಳೂರು:</strong> ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅನುವಾದಕರು ಹಾಗೂ ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.</p><p>2025ರ ಜ.1ರಿಂದ ಡಿ.31ರ ಅವಧಿಯಲ್ಲಿ ಪ್ರಥಮಾವೃತ್ತಿಯಲ್ಲಿ ಪ್ರಕಟಗೊಂಡ ಅನುವಾದಿತ ಕೃತಿಗಳು ಹಾಗೂ ಅನುವಾದ ಅಧ್ಯಯನ ಕುರಿತ ಪುಸ್ತಕಗಳನ್ನು ಪರಿಗಣಿಸಲಾಗುತ್ತದೆ. ಕನ್ನಡದಿಂದ ಇತರ ಭಾಷೆಗೆ ಅಥವಾ ಇತರ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳನ್ನು ಕಳುಹಿಸಬಹುದಾಗಿದೆ.</p><p>ಪ್ರತಿ ಪುಸ್ತಕದ ನಾಲ್ಕು ಪ್ರತಿಗಳನ್ನು ಮಾರ್ಚ್ 31ರೊಳಗೆ ರಿಜಿಸ್ಟ್ರಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಜ್ಞಾನಭಾರತಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು–560056 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಅಕಾಡೆಮಿ ರಿಜಿಸ್ಟ್ರಾರ್ ದತ್ತಪ್ಪ ಸಾಗನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕೆ 080 23183311</p><p>****</p><p><strong>ಕವಿ-ಕವಯಿತ್ರಿಯರಿಗೆ ಕವನ ಸ್ಪರ್ಧೆ</strong></p><p>ಬೆಂಗಳೂರು: ಕನ್ನಡ ಸಂಘರ್ಷ ಸಮಿತಿಯು ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್ 23ರಂದು ಉದಯೋನ್ಮುಖ ಕವಿ-ಕವಯಿತ್ರಿಯರಿಗೆ ಕವನ ಸ್ಪರ್ಧೆ ಆಯೋಜಿಸಿದೆ.</p><p>ಇದುವರೆಗೆ ಒಂದೂ ಕವನ ಸಂಕಲನ ಹೊರತರದ ಕವಿ-ಕವಯಿತ್ರಿಯರು, ‘ಕನ್ನಡ ನಾಡು–ನುಡಿ, ಸಾಹಿತ್ಯ, ಕನ್ನಡ ನಾಡಿನ ಪರಂಪರೆ’ ಕುರಿತು ರಚಿಸಿದ ಒಂದು ಕವನವನ್ನು ಸ್ಪರ್ಧೆಗೆ ಕಳುಹಿಸಿಕೊಡಬಹುದಾಗಿದೆ. ಪ್ರಥಮ ಬಹುಮಾನ ₹2,500, ದ್ವಿತೀಯ ಬಹುಮಾನ ₹2,000 ಹಾಗೂ ತೃತೀಯ ಬಹುಮಾನ ₹ 1,500 ಒಳಗೊಂಡಿದೆ.</p><p>ಆಸಕ್ತರು ಕವನವನ್ನು ಎ.ಎಸ್. ನಾಗರಾಜಸ್ವಾಮಿ, ಅಧ್ಯಕ್ಷರು, ಕನ್ನಡ ಸಂಘರ್ಷ ಸಮಿತಿ, ನಂ.3, 1ನೇ ತಿರುವು, 1ನೇ ಮುಖ್ಯರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಬೆಂಗಳೂರು-560056 ಈ ವಿಳಾಸಕ್ಕೆ ಮಾರ್ಚ್ 5ರೊಳಗೆ ಕಳುಹಿಸಬೇಕು. ₹ 50 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 9739001410 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅನುವಾದಕರು ಹಾಗೂ ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.</p><p>2025ರ ಜ.1ರಿಂದ ಡಿ.31ರ ಅವಧಿಯಲ್ಲಿ ಪ್ರಥಮಾವೃತ್ತಿಯಲ್ಲಿ ಪ್ರಕಟಗೊಂಡ ಅನುವಾದಿತ ಕೃತಿಗಳು ಹಾಗೂ ಅನುವಾದ ಅಧ್ಯಯನ ಕುರಿತ ಪುಸ್ತಕಗಳನ್ನು ಪರಿಗಣಿಸಲಾಗುತ್ತದೆ. ಕನ್ನಡದಿಂದ ಇತರ ಭಾಷೆಗೆ ಅಥವಾ ಇತರ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳನ್ನು ಕಳುಹಿಸಬಹುದಾಗಿದೆ.</p><p>ಪ್ರತಿ ಪುಸ್ತಕದ ನಾಲ್ಕು ಪ್ರತಿಗಳನ್ನು ಮಾರ್ಚ್ 31ರೊಳಗೆ ರಿಜಿಸ್ಟ್ರಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಜ್ಞಾನಭಾರತಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು–560056 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಅಕಾಡೆಮಿ ರಿಜಿಸ್ಟ್ರಾರ್ ದತ್ತಪ್ಪ ಸಾಗನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕೆ 080 23183311</p><p>****</p><p><strong>ಕವಿ-ಕವಯಿತ್ರಿಯರಿಗೆ ಕವನ ಸ್ಪರ್ಧೆ</strong></p><p>ಬೆಂಗಳೂರು: ಕನ್ನಡ ಸಂಘರ್ಷ ಸಮಿತಿಯು ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್ 23ರಂದು ಉದಯೋನ್ಮುಖ ಕವಿ-ಕವಯಿತ್ರಿಯರಿಗೆ ಕವನ ಸ್ಪರ್ಧೆ ಆಯೋಜಿಸಿದೆ.</p><p>ಇದುವರೆಗೆ ಒಂದೂ ಕವನ ಸಂಕಲನ ಹೊರತರದ ಕವಿ-ಕವಯಿತ್ರಿಯರು, ‘ಕನ್ನಡ ನಾಡು–ನುಡಿ, ಸಾಹಿತ್ಯ, ಕನ್ನಡ ನಾಡಿನ ಪರಂಪರೆ’ ಕುರಿತು ರಚಿಸಿದ ಒಂದು ಕವನವನ್ನು ಸ್ಪರ್ಧೆಗೆ ಕಳುಹಿಸಿಕೊಡಬಹುದಾಗಿದೆ. ಪ್ರಥಮ ಬಹುಮಾನ ₹2,500, ದ್ವಿತೀಯ ಬಹುಮಾನ ₹2,000 ಹಾಗೂ ತೃತೀಯ ಬಹುಮಾನ ₹ 1,500 ಒಳಗೊಂಡಿದೆ.</p><p>ಆಸಕ್ತರು ಕವನವನ್ನು ಎ.ಎಸ್. ನಾಗರಾಜಸ್ವಾಮಿ, ಅಧ್ಯಕ್ಷರು, ಕನ್ನಡ ಸಂಘರ್ಷ ಸಮಿತಿ, ನಂ.3, 1ನೇ ತಿರುವು, 1ನೇ ಮುಖ್ಯರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಬೆಂಗಳೂರು-560056 ಈ ವಿಳಾಸಕ್ಕೆ ಮಾರ್ಚ್ 5ರೊಳಗೆ ಕಳುಹಿಸಬೇಕು. ₹ 50 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 9739001410 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>