<p><strong>ಬೆಂಗಳೂರು</strong>: ‘ಕುವೆಂಪು ಅವರು ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸಿದ್ದರು. ಜೊತೆಗೆ ತಮ್ಮ ಅಗಾಧ ಪಾಂಡಿತ್ಯದ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ’ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಹೇಳಿದರು. </p>.<p>ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ವಿಶ್ವವನ್ನು ಆಳುವುದು ವೈಚಾರಿಕತೆಯೇ ಹೊರತು ವ್ಯಕ್ತಿ ಅಥವಾ ನಂಬಿಕೆಗಳಲ್ಲ. ಕುವೆಂಪು ಇಂದು ನಮ್ಮ ನಡುವೆ ಇಲ್ಲದಿದ್ದರೂ ಅವರ ವೈಚಾರಿಕ ಚಿಂತನೆಗಳು ಮತ್ತು ವಿಶ್ವಮಾನವ ಸಂದೇಶ ಇಂದಿಗೂ ಜೀವಂತವಾಗಿದೆ’ ಎಂದು ಹೇಳಿದರು. </p>.<p>ಇದೇ ಸಂದರ್ಭದಲ್ಲಿ ಯುವ ಸಾಹಿತಿ ಆಶಾ ಶಿವುಗೌಡ ಹಾಗೂ ವಿಜ್ಞಾನ ಲೇಖಕ ಹಾಗೂ ಸಮಾವೇಶದ ಸರ್ವಾಧ್ಯಕ್ಷ ಆರ್.ಎಸ್. ರವೀಂದ್ರ ಅವರಿಗೆ ಪುನೀತ್ ರಾಜಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಲೇಖಕ ಶಶಿಕಾಂತ್ ರಾವ್, ಟ್ರಸ್ಟ್ನ ಅಧ್ಯಕ್ಷ ಎಸ್. ರಾಮಲಿಂಗೇಶ್ವರ, ಕಾರ್ಯದರ್ಶಿ ಸಿ. ಹೇಮಾವತಿ, ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಇಂದಿರಾ ಕೃಷ್ಣಪ್ಪ, ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕೃಷ್ಣ ಹಾನ್ಬಾಳ್, ಆರ್. ವಾದಿರಾಜ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕುವೆಂಪು ಅವರು ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸಿದ್ದರು. ಜೊತೆಗೆ ತಮ್ಮ ಅಗಾಧ ಪಾಂಡಿತ್ಯದ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ’ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಹೇಳಿದರು. </p>.<p>ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ವಿಶ್ವವನ್ನು ಆಳುವುದು ವೈಚಾರಿಕತೆಯೇ ಹೊರತು ವ್ಯಕ್ತಿ ಅಥವಾ ನಂಬಿಕೆಗಳಲ್ಲ. ಕುವೆಂಪು ಇಂದು ನಮ್ಮ ನಡುವೆ ಇಲ್ಲದಿದ್ದರೂ ಅವರ ವೈಚಾರಿಕ ಚಿಂತನೆಗಳು ಮತ್ತು ವಿಶ್ವಮಾನವ ಸಂದೇಶ ಇಂದಿಗೂ ಜೀವಂತವಾಗಿದೆ’ ಎಂದು ಹೇಳಿದರು. </p>.<p>ಇದೇ ಸಂದರ್ಭದಲ್ಲಿ ಯುವ ಸಾಹಿತಿ ಆಶಾ ಶಿವುಗೌಡ ಹಾಗೂ ವಿಜ್ಞಾನ ಲೇಖಕ ಹಾಗೂ ಸಮಾವೇಶದ ಸರ್ವಾಧ್ಯಕ್ಷ ಆರ್.ಎಸ್. ರವೀಂದ್ರ ಅವರಿಗೆ ಪುನೀತ್ ರಾಜಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. </p>.<p>ಲೇಖಕ ಶಶಿಕಾಂತ್ ರಾವ್, ಟ್ರಸ್ಟ್ನ ಅಧ್ಯಕ್ಷ ಎಸ್. ರಾಮಲಿಂಗೇಶ್ವರ, ಕಾರ್ಯದರ್ಶಿ ಸಿ. ಹೇಮಾವತಿ, ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಇಂದಿರಾ ಕೃಷ್ಣಪ್ಪ, ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕೃಷ್ಣ ಹಾನ್ಬಾಳ್, ಆರ್. ವಾದಿರಾಜ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>