‘ಕಥೆ, ಕಾದಂಬರಿ, ಕಾವ್ಯಗಳ ಮೂಲಕ ಕುವೆಂಪು ಅವರು ವಿಶ್ವಮಾನವ ಸಂದೇಶ ಸಾರಿದರೆ, ವರನಟ ರಾಜ್ಕುಮಾರ್ ಅವರು ಪೌರಾಣಿಕ, ಸಾಮಾಜಿಕ, ಐತಿಹಾಸಿಕ, ಕಾದಂಬರಿ ಆಧಾರಿತ ಚಿತ್ರಗಳಲ್ಲಿ ನಟನೆ ಮಾಡುವುದರ ಮೂಲಕ ಕನ್ನಡದ ಅಸ್ಮಿತೆಯನ್ನು ಪರದೆಯ ಮೂಲಕ ಸಾರ್ವಜನಿಕರ ಮುಂದೆ ಪ್ರಸ್ತುತಪಡಿಸಿದ್ದಾರೆ. ಆದ್ದರಿಂದ, ರಾಜ್ಕುಮಾರ್ ಅವರ ಕನ್ನಡ ಅಸ್ಮಿತೆಯ ಬಗ್ಗೆ ಚರ್ಚೆಗಳು ನಡೆಯಬೇಕು’ ಎಂದರು.